ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಬಡ ಮಹಿಳೆಯ ಮನೆ ನಿರ್ಮಾಣಕ್ಕಾಗಿ ಭೂಮಿ ಪೂಜೆ

1

ಅವಿಭಜಿತ  ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ  ಇತರ ಸಂಘಟನೆಗಳಿಗೆ ಸಾರ್ವಜನಿಕರಿಗೆ ಮಾದರಿಯಾಗಿರುವಂತೆ ಕಾರ್ಯನಿರ್ವಹಿಸುತ್ತಿರುವ ಮಂಜಣ್ಣ ಸೇವಾ  ಬ್ರಿಗೇಡ್ ಟ್ರಸ್ಟ್ ವತಿಯಿಂದ   ಸುಮಾರು 200ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ 60ಲಕ್ಷಕ್ಕೂ ಅಧಿಕ ಮೊತ್ತದ ಸೇವಾ ಯೋಜನೆಯನ್ನು ಮಾಡುವ ಮೂಲಕ ಬಡವರ ಕಣ್ಣೀರು ವರೆಸುವ ಕಾರ್ಯ ಮಾಡಿದೆ.
ಇದೀಗ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್(ರಿ.) ಇದರ ವತಿಯಿಂದ ಮತ್ತೊಂದು ಯೋಜನೆ ಮೂಲಕ ಬಡವರ ಕಣ್ಣೀರು ಒರೆಸಲು ಮನೆ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಿದೆ.
ದಿನ ಕಳೆಯಲು ಕಷ್ಟದಲ್ಲಿದ್ದ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಮೊದಲ ಹಂತವಾಗಿ ಭೂಮಿ ಪೂಜೆ ನೆರವೇರಿದೆ. ಮಂಗಳೂರಿನ ಪಡೀಲ್ ನಿವಾಸಿ ಸುನಿತಾ ಎಂಬವರಿಗೆ ಈ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಮನೆ ಕೆಲಸ ಮಾಡುತ್ತಾ ಮಾನಸಿಕ ಸ್ಥಿತಿ ಸರಿಯಿಲ್ಲದ ಅಣ್ಣನ ಜೊತೆ ಬದುಕು ಕಳೇಯುತ್ತಿರುವ ಸುನಿತಾ ಅವರ ಪರಿಸ್ಥಿತಿ ದಿನದೂಡಲು ಕಷ್ಟಕರವಾಗಿದೆ. ಇವರ ಕಷ್ಟ ನೋಡಿದ ಮನೋಜ್ ಅಳಪೆ ಭಟ್ರಬೆಟ್ಟು ಇವರು ಸದಾ ಸೇವೆಯಲ್ಲಿ ತೊಡಗಿರುವ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್(ರಿ.) ಸಂಸ್ಥೆಗೆ ಮನವಿ ಮಾಡಿದ್ದಾರೆ.
ತಕ್ಷಣ ಮನವಿಗೆ ಸ್ಪಂದಿಸಿದ ಸಂಸ್ಥೆ ಮಹಿಳೆಯ ಕಷ್ಟಕ್ಕೆ ಬೆನ್ನೆಲುಬಾಗಿ ನಿಲ್ಲಲು ತೀರ್ಮಾನಿಸಿತು. ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆರ್ಚಕರಾದ ಸುಬ್ರಹ್ಮಣ್ಯ ಐತಾಳ್ ಸಮ್ಮುಖದಲ್ಲಿ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್(ರಿ.) ಇದರ ಸ್ಥಾಪಕಾಧ್ಯಕ್ಷರಾದ ಮನೋಜ್ ಕೋಡಿಕೆರೆ ಇವರ ಉಪಸ್ಥಿತಿಯಲ್ಲಿ ಭೂಮಿ ಪೂಜೆಯ ವಿಧಿವಿಧಾನಗಳು ನಡೆಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗರೋಡಿ, ವಾಮನ್ ಅಳಪೆ ಗರೋಡಿ ದೇವಸ್ಥಾನದ ಟ್ರಸ್ಟ್ ಸದಸ್ಯರು, ಚರಣ್ ಅಳಪೆ ಭಟ್ರಬೆಟ್ಟು, ಶೋಭಾ ಪೂಜಾರಿ ಕಾರ್ಪೊರೇಟರ್ ಅಳಪೆ ಭಟ್ರಬೆಟ್ಟು, ವಿಕ್ಕಿ ಪೂಜಾರಿ ಪಡೀಲ್  ಪಡೀಲ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರು, ಗೆಳೆಯರ ಬಳಗ ಸುರತ್ಕಲ್ ಇದರ ಸ್ಥಾಪಕಾಧ್ಯಕ್ಷರಾದ ನಾಗೇಶ್ ಪೂಜಾರಿ ತೋಕೂರು, ಮನೋಜ್ ಅಳಪೆ ಭಟ್ರಬೆಟ್ಟು ಸೇರಿದಂತೆ ಮಂಜಣ್ಣ ಸೇವಾ ಬ್ರಿಗೇಡ್  ಇದರ ಅಧ್ಯಕ್ಷರು ರಂಜಿತ್ ಜೆ ಶೆಟ್ಟಿ, ಕಾರ್ಯದರ್ಶಿ ಗಂಗಾಧರ್ ಶೆಟ್ಟಿ ತೋಕೂರು, ಕೋಶಾಧಿಕಾರಿ ರೇವಂತ್ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...