ಕಾಂಗ್ರೆಸ್ ನ ಅತಿಯಾದ ಆತ್ಮವಿಶ್ವಾಸ ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾರಣ:: ಶಿವ ಸೇನೆ ( ಯು ಬಿ ಟಿ )

65

“ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ “ಅತಿಯಾದ ಆತ್ಮವಿಶ್ವಾಸ” ಮತ್ತು “ಧೋರಣೆ” ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ.

ಎಮ್ ವಿ ಎ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕಿತ್ತು ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಅವರು ಹೇಳಿದ್ದಾರೆ.

“ಫಲಿತಾಂಶಕ್ಕೂ ಮುಂಚೆಯೇ ಕಾಂಗ್ರೆಸ್ ನಾಯಕರು ಸೂಟ್ ಮತ್ತು ಟೈನೊಂದಿಗೆ ಸಿದ್ಧರಾಗಿದ್ದರು. ಅವರ ಅತಿಯಾದ ಆತ್ಮವಿಶ್ವಾಸವೇ” ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸೋಲಿಗೆ ಕಾರಣ ಶಿವಸೇನಾ ನಾಯಕ ಟೀಕಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ನಂತರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಂತೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿತ್ತು. ಅವರ ಈ ವರ್ತನೆ ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತಿದೆ ಎಂದು ದಾನ್ವೆ ಹೇಳಿದ್ದಾರೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ ಧೋರಣೆಯು ಎಂವಿಎ ಭವಿಷ್ಯಕ್ಕೆ ಹಾನಿ ಮಾಡಿದೆ ಎಂದು ದಾನ್ವೆ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸಮರ್ಥವಾಗಿ ಕಾರ್ಯನಿರ್ವಹಿಸಿತ್ತು ಮತ್ತು 13 ಸ್ಥಾನಗಳನ್ನು ಗಳಿಸಿತು. ಇದು ಎಂವಿಎ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ.

ಈ ಯಶಸ್ಸು ರಾಜ್ಯ ಚುನಾವಣಾ ಮಾತುಕತೆಗಳ ಸಮಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಕಾಂಗ್ರೆಸ್ ಅನ್ನು ಪ್ರೇರೇಪಿಸಿತು. ಇದು ಮೈತ್ರಿಕೂಟದಲ್ಲಿ ಉದ್ವಿಗ್ನತೆಗೆ ಕಾರಣವಾಯಿತು.

ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, 16 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಏತನ್ಮಧ್ಯೆ, ಶಿವಸೇನೆ(ಯುಬಿಟಿ) 89 ಸ್ಥಾನಗಳಲ್ಲಿ ಸ್ಪರ್ಧಿಸಿ 20 ಸ್ಥಾನ ಪಡೆದರೆ, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) 87 ಸ್ಥಾನಗಳಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದೆ.

ಬಿಜೆಪಿ ನೇತೃತ್ವದ ಮಹಾಯುತಿ 288 ಅಸೆಂಬ್ಲಿ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಪಡೆದುಕೊಂಡು ನಿರ್ಣಾಯಕ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಎಂವಿಎ ಮೈತ್ರಿಕೂಟ, ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಪಾಳಯ 46 ಸ್ಥಾನಗಳನ್ನು ಗೆದ್ದಿದ್ದೆ.

Leave a comment

Leave a Reply

Your email address will not be published. Required fields are marked *

Related Articles

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮೇ 7 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು....

ಪಂಚರಾಜ್ಯ ಚುನಾವಣೆ ಪಶ್ಚಿಮ ಬಂಗಾಳ ಅಸ್ಸಾಂ, ಬಿಜೆಪಿ ಕೇರಳ ಯುಡಿಎಫ್ ತಮಿಳುನಾಡು ನಟ ವಿಜಯ್ ನೇತೃತ್ವದ ಟಿವಿಕೆ, ಪುದುಚೆರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ತಮಿಳುನಾಡಿನಲ್ಲಿ ನಟ...

ಅವಧಿಗಿಂತ ಮೊದಲೇ ಅಪ್ಪಳಿಸಲಿದೆ ಮುಂಗಾರು ಮಳೆ; ಅಂಡಮಾನ್ ಮತ್ತು ಕೇರಳಕ್ಕೆ ಶೀಘ್ರ ಆಗಮನ

ಬೆಂಗಳೂರು: ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ...