ಅಶ್ಲೀಲ ಚಿತ್ರ ಪ್ರಕರಣ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ ಮೇಲೆ ಇಡಿ ದಾಳಿ

2

“ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ್ದು, ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು

. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ ಕುಂದ್ರಾ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಉದ್ಯಮಿಯಾಗಿ ಗುರುತಿಸಿಕೊಂಡಿರುವ ರಾಜ್ ಕುಂದ್ರಾ ಅವರು ಮುಂಬೈನಲ್ಲಿ ವಾಸಿಸುತ್ತಿದ್ದು, ನಟರಿಗೆ ಹಣ ವಂಚನೆ ಕೇಸ್ಗೆ ಸಂಬಂಧಿಸಿದಂತೆ ಹಲವಾರು ಸಲ ಕಾನೂನು ಸಮಸ್ಯೆ ಎದುರಿಸಿದ್ದಾರೆ.

ನೀಲಿ ಚಿತ್ರ ತಾರೆ ಬಂಧನ ಬಾಂಗ್ಲಾದೇಶದ ಅಡಲ್ಟ್ ಫಿಲ್ಮ್ ಆ್ಯಕ್ಟರ್ ರಿಯಾ ಅರವಿಂದ ಬರ್ದೆ ಅವರು ಮಹಾರಾಷ್ಟ್ರದ ಉಲ್ಹಾಸನಗರದಲ್ಲಿ ಅರೆಸ್ಟ್ ಆಗಿದ್ದರು. ಅವರು ನಕಲಿ ದಾಖಲೆಗಳನ್ನು ಇಟ್ಟುಕೊಂಡು ಭಾರತದಲ್ಲಿ ಇದ್ದ ಆರೋಪದ ಮೇಲೆ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಅವರು ರಾಜ್ ಕುಂದ್ರಾ ಮಾಡಿದ್ದ ಪ್ರಾಜೆಕ್ಟ್ಗಳಲ್ಲಿಯೂ ಕೆಲಸ ಮಾಡಿದ್ದರು ಎನ್ನಲಾಗಿತ್ತು. ಏನಿದು ಪ್ರಕರಣ? ರಾಜ್ ಕುಂದ್ರಾ ಅವರು 2021ರಲ್ಲಿ ಜೂನ್ನಲ್ಲಿ ಅರೆಸ್ಟ್ ಆಗಿದ್ದರು.

ನೀಲಿ ಚಿತ್ರಗಳನ್ನು ನಿರ್ಮಿಸಿದ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಪತಿ ಕೂಡ ಆಗಿರುವ ರಾಜ್ ಕುಂದ್ರಾರನ್ನು ಬಂಧಿಸಲಾಗಿತ್ತು. ನಂತರ ಸೆಪ್ಟೆಂಬರ್ ತಿಂಗಳಲ್ಲಿ ಜಾಮೀನು ಸಿಕ್ಕಿತ್ತು. ಶಿಲ್ಪಾ ಶೆಟ್ಟಿ ಪತಿ 2 ತಿಂಗಳು ಜೈಲಿನಲ್ಲಿ ಕಳೆದಿದ್ದರು. ಈ ಇಡೀ ಕೇಸ್ನಲ್ಲಿ ರಾಜ್ ಕುಂದ್ರಾ ಮುಖ್ಯ ಮಾಸ್ಟರ್ ಪ್ಲಾನರ್ ಎಂದು ಮುಂಬೈ ಪೊಲೀಸರು ಹೇಳಿಕೆ ಕೊಟ್ಟಿದ್ದರು.

2021 ಫೆಬ್ರವರಿಯಲ್ಲಿ ಮುಂಬೈ ಪೊಲೀಸರು ನೀಲಿ ಚಿತ್ರ ನೆಟ್ವರ್ಕ್ ಬೇಧಿಸಿದ್ದರು. ಈ ಒಂದು ಪ್ರಕರಣದಲ್ಲಿ ಐದು ಜನರನ್ನು ಅರೆಸ್ಟ್ ಮಾಡಲಾಗಿತ್ತು. ನಂತರ ಹೆಚ್ಚಿನ ತನಿಖೆಯಾಗಿ ಮತ್ತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿತ್ತು. ಆದರೆ ಆ ನಂತರ ಮುಂಬೈ ಪೊಲೀಸ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ತಂಡದ ನೇತೃತ್ವ ಬದಲಾಗಿ ಈ ಕೇಸ್ ಸುದ್ದಿಯಿಂದ ದೂರವಾಗಿತ್ತು.

ಜೂನ್ನಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯಲ್ಲಿ ರಾಜ್ ಕುಂದ್ರಾ ಒಡೆತನದ ಹಾಟ್ ಶಾಟ್ಸ್ ಎಂಬ ಎಪ್ಲಿಕೇಷನ್ ಬಗ್ಗೆ ರಿವೀಲ್ ಆಗಿತ್ತು. ಈ ಎಪ್ಲಿಕೇಷನ್ಗೆ ರಾಜ್ ಕುಂದ್ರಾ ಕಂಪೆನಿಯ ಮಾಲೀಕತ್ವ ಇತ್ತು.

ನಂತರದಲ್ಲಿ ಈ ಕುರಿತು ತನಿಖೆಯಾಗಿ ಇದರಲ್ಲಿ ಅಡಲ್ಟ್ ಕಂಟೆಂಟ್ ಪತ್ತೆಯಾಗಿ ಸರ್ವರ್ ಸೀಜ್ ಮಾಡಲಾಗಿತ್ತು. ಇದೀಗ ಮತ್ತೆ ರಾಜ್ ಕುಂದ್ರಾ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡುವ ಮೂಲಕ ಮತ್ತೆ ಈ ಪ್ರಕರಣ ಜೀವ ಪಡೆದುಕೊಂಡಿದೆ.

Leave a comment

Leave a Reply

Your email address will not be published. Required fields are marked *

Related Articles

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ ...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್...

180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ...