thekarnatakatoday.com
News

ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ :: ಬಿಜೆಪಿ ಮಹಿಳಾ ಮೋರ್ಚಾ ಆರೋಪ

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮತ್ತು ಅವರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ಆರೋಪಿಸಿದೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ. ಮಂಜುಳಾ, ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಗಂಭೀರ ಲೈಂಗಿಕ ಆರೋಪ ಕೇಳಿಬಂದಿರುವ ಗುರಪ್ಪ ನಾಯ್ಡು ವಿರುದ್ಧ ಕ್ರಮ ಕೈಗೊಳ್ಳದ ಕಾಂಗ್ರೆಸ್, ಮುಸ್ಲಿಂ ವಿರುದ್ಧ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಅವರನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಟೀಕಿಸಿದರು.

ಗುರಪ್ಪ ನಾಯ್ಡು ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಬಳಸಿಕೊಂಡು ಶಾಲೆಯ ಶಿಕ್ಷಕಿಯರಿಗೆ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಂಜುಳಾ ಆರೋಪಿಸಿದರು.

ಹುಣಸೂರಿನಲ್ಲಿ ಕಿರು ಹಣಕಾಸು ಸಂಸ್ಥೆಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಗ್ರ ತನಿಖೆ ನಡೆಸಿ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 10 ದಿನದಲ್ಲಿ ಏಳು ಬಾಣಂತಿಯರ ಸಾವಿನ ಬಗ್ಗೆ ನೋವು ವ್ಯಕ್ತಪಡಿಸಿದ ಮಂಜುಳಾ, ಆರೋಗ್ಯ ಕ್ಷೇತ್ರದಲ್ಲಿ ಹೊಣೆಗಾರಿಕೆ ಖಾತರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆರೋಪಿಸಿದರು.

Related posts

5 ಸಾವಿರ ಲಂಚ ಪಡೆದ ಆಹಾರ ಸುರಕ್ಷತಾ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ

The Karnataka Today

ಬೆಂಗಳೂರಿನ 8 ವರ್ಷದ ಮಗುವಿಗೆ ಎಚ್ಎಂಪಿ ವಿ ವೈರಸ್ ಸೋಂಕು ಪತ್ತೆಯೆಂಬದು ನಿಜವಲ್ಲ ::ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

The Karnataka Today

ಕುಡಿತದ ಅಮಲಿನಲ್ಲಿ ಸ್ವಂತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಂದೆ ಪತಿಯನ್ನು ಕೊಂದ ಪತ್ನಿ

The Karnataka Today

Leave a Comment