ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

61

“ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಣಂತಿಯರ ಸಾವಿಗೆ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.


ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು. ರಿಂಗಲ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು.

ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಬಳಿಕ ಸೆಂಟ್ರಲ್ ಡ್ರಗ್ ಲ್ಯಾಬೊರೇಟರಿಯಲ್ಲಿ ಪರೀಕ್ಷೆ ನಡೆಸಿದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂದಿತ್ತು ಎಂದು ತಿಳಿಸಿದರು.

ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್ ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು.

ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನು ಅನರೋಬಿಕ್ ಟೆಸ್ಟ್ ಗೆ ಕಳುಹಿಸಿದ್ದೇವೆ. ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣವೇ ಎಂಬುದಕ್ಕೆ ಪರೀಕ್ಷೆಯಲ್ಲಿ ಸ್ಪಷ್ಟತೆ ಸಿಗಲಿದೆ.

ವಾರದಲ್ಲಿ ಈ ವರದಿ ಬರಲಿದೆ. ತದನಂತರ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ವೇಟ್ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದರು

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...