ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲರಾದರೆ ಪೋಲಿಸ್ ಆಯುಕ್ತರು ಅಥವಾ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಜಿ ಪರಮೇಶ್ವರ್

66

“ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಆಯಾ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಸಂಬಂಧಿತ ಚಟುವಟಿಕೆಗಳು ಮುಂದುವರಿದರೆ ಇನ್ಸ್‌ಪೆಕ್ಟರ್‌ಗಳು, ಉಪ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ನೂತನ ಪೊಲೀಸ್ ಕ್ವಾರ್ಟರ್ಸ್ ಹಾಗೂ ಪೊಲೀಸ್ ಠಾಣೆ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಾದಕ ವಸ್ತು ಮಾರಾಟದ ವಿರುದ್ಧದ ಸಮರಕ್ಕೆ ಕರ್ನಾಟಕದ ಬದ್ಧತೆಯನ್ನು ಪುನರುಚ್ಚರಿಸಿದರು. ಕಳೆದ ವರ್ಷದಲ್ಲಿ ಬೆಂಗಳೂರಿನಲ್ಲಿ 250 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ನಾಶಪಡಿಸಲಾಗಿದೆ ಎಂದು ತಿಳಿಸಿದರು.

ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಹಲವಾರು ವಿದೇಶಿ ಪ್ರಜೆಗಳನ್ನು ಬಂಧಿಸಿ, ಗಡಿಪಾರು ಮಾಡಲಾಗಿದೆ ಮತ್ತು ಅನೇಕ ಪೆಡ್ಲರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೆಲವು ಸಂದರ್ಭಗಳಲ್ಲಿ ಪೊಲೀಸರು ಗುಂಡು ಹಾರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಅಗತ್ಯವಿದ್ದರೆ ಪೊಲೀಸರು ಗುಂಡು ಹಾರಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ನಕ್ಸಲ್ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಮಾವೋವಾದಿಗಳು ಶರಣಾಗುವಂತೆ ಉತ್ತೇಜಿಸಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಇತ್ತೀಚಿಗೆ ಎನ್ ಕೌಂಟರ್ ನಲ್ಲಿ ಹತ್ಯೆಯಾದ ನಕ್ಸಲ್ ನಾಯಕ ವಿಕ್ರಮ್ ಗೌಡ ಸಹಚರರು ಸರ್ಕಾರದ ಪುನರ್ವಸತಿ ನೀತಿಯಡಿಯಲ್ಲಿ ಶರಣಾಗುವಂತೆ ಒತ್ತಾಯಿಸಿದರು.

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಎಲ್ಲಾರಿಗೂ ಒಂದೇ ಎಂದು ಪುನರುಚ್ಚರಿಸಿದರು

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...