ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಸಲ್ಲಿಸಿದ ಇಸ್ಕಾನ್

73

“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಬಗ್ಗೆ ಒಗ್ಗಟ್ಟು ಪ್ರದರ್ಶಿಸಲು ಇಸ್ಕಾನ್ ದೇವಾಲಯ ಬಳಿ ಆಯೋಜಿಸಲಾದ ಶಾಂತಿಯುತ ಸಂಕೀರ್ತನೆಯಲ್ಲಿ ಮಾತನಾಡಿದ ದಾಸ್, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ವರದಿಗಳನ್ನು ನಾವು ನೋಡಿದ್ದೇವೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ಹೊಂದಿರುವುದಾಗಿ ತಿಳಿಸಿದರು.

ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ ಎಂದರು.

ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ನ ವಕ್ತಾರ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಇತ್ತೀಚೆಗೆ ಬಂಧಿಸಿರುವುದು ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ದಾಳಿಗೆ ಒಳಗಾಗುತ್ತಿರುವುದನ್ನು ಮಧು ಪಂಡಿತ್ ದಾಸ್ ಪ್ರಸ್ತಾಪಿಸಿದರು.

ಇಂದು ಮತ್ತೆ ಚಟ್ಟೋಗ್ರಾಮದಲ್ಲಿ ಮೂರು ಹಿಂದೂ ದೇವಾಲಯಗಳ ಧ್ವಂಸ ಮಾಡಲಾಗಿದೆ.ಬಾಂಗ್ಲಾದಲ್ಲಿ ಹಿಂದೂ ದೇವಾಲಯಗಳನ್ನು ಗುರಿಯಾಗಿಸಲಾಗುತ್ತಿದೆ. ಸನಾತನ ಧರ್ಮದ ಅನುಯಾಯಿಗಳು ಗಂಭೀರ ದಾಳಿಗೆ ಒಳಗಾಗುತ್ತಿದ್ದಾರೆ. ಇದನ್ನು ನಿಲ್ಲಿಸಬೇಕಾಗಿದೆ ಎಂದು ಅವರು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...