thekarnatakatoday.com
Politics

ಶಿಸ್ತು ಸಮಿತಿ ಹೆಸರಿನಲ್ಲಿ ವಿಜಯೇಂದ್ರ ನಕಲಿ ನೋಟೀಸ್ ನೀಡಿದ್ದಾನೆ ಅಸಲಿ ನೋಟೀಸ್ ಬರಲಿ ಉತ್ತರಿಸುತ್ತೇನೆ::ಬಸವನಗೌಡ ಯತ್ನಾಳ್

” ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “


ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ.

ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ” ಎಂದು ಹೇಳಿದ್ದಾರೆ.

ಆರೋಪಗಳಿಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಿ: ಯತ್ನಾಳ್’ಗೆ ವಿಜಯೇಂದ್ರ ಸವಾಲು ಇದೇ ವೇಳೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಯತ್ನಾಳ್, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ

ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ ಎಂದು ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ.

ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

Related posts

ವಿಧಾನಸೌಧದಲ್ಲಿ ಅತ್ಯಾಚಾರ ನಡೆಸಿದ ಆರೋಪ ಹೊತ್ತವರು ಬಿಜೆಪಿ ಪಕ್ಷದವರು ವಿಧಾನಸಭೆಯಲ್ಲಿ ಗೂಂಡಾ ವರ್ತನೆ ನಾಚಿಕೆ ಸಂಗತಿ:: ಡಿಕೆ ಶಿವಕುಮಾರ್

The Karnataka Today

ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಅಮ್ ಆದ್ಮಿ ನಾಯಕ ಕೈಲಾಶ್ ಗೆಹ್ಲೋಟ್ ಬಿ ಜೆ ಪಿ ಸೇರ್ಪಡೆ

The Karnataka Today

ಜಿಲ್ಲಾಧ್ಯಕ್ಷರ ನೇಮಕದಲ್ಲಿನನ್ನ ಪಾತ್ರ ಇಲ್ಲ ಈ ಬಗ್ಗೆ ಯಾವುದೇ ಅಭಿಪ್ರಾಯ ನಾನು ಹೈಕಮಾಂಡ್ ಗೆ ನೀಡಿಲ್ಲ ವರಿಷ್ಠರು ನನ್ನ ಅಭಿಪ್ರಾಯ ಕೂಡ ಕೇಳಿಲ್ಲ ಬಿವೈ ವಿಜಯೇಂದ್ರ

The Karnataka Today

Leave a Comment