ಶಿಸ್ತು ಸಮಿತಿ ಹೆಸರಿನಲ್ಲಿ ವಿಜಯೇಂದ್ರ ನಕಲಿ ನೋಟೀಸ್ ನೀಡಿದ್ದಾನೆ ಅಸಲಿ ನೋಟೀಸ್ ಬರಲಿ ಉತ್ತರಿಸುತ್ತೇನೆ::ಬಸವನಗೌಡ ಯತ್ನಾಳ್

61

” ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “


ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ.

ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ” ಎಂದು ಹೇಳಿದ್ದಾರೆ.

ಆರೋಪಗಳಿಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಿ: ಯತ್ನಾಳ್’ಗೆ ವಿಜಯೇಂದ್ರ ಸವಾಲು ಇದೇ ವೇಳೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಯತ್ನಾಳ್, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ

ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ ಎಂದು ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ.

ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...