ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ.
ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಹೊಡೆದಿದ್ದು .
ಪ್ರಕಾಶ್ ಶೆಟ್ಟಿ ಇದೇ ವೇಳೆ, ತಿರುಗಿಸಿ ಹರೀಶ ಕುಮಾರ್ ಹೊಡೆಯಲು ಪ್ಮುಂದಾಗಿದ್ದಾರೆಂದು ಎನ್ನವ ಮಾಹಿತಿ ದೊರೆತಿದೆ.
ಉಭಯ ನಾಯಕರ ತಂಡದ ಕಾರ್ಯಕರ್ತರು ಜಮಾಯಿಸಿದ್ದು ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ.