ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಹಾಜಿ ಮಲಂಗ ಗಣಿಯಾರ್ ಯಡ್ರಾಮಿಯಲ್ಲಿ ಉದ್ವಿಗ್ನ ಸ್ಥಿತಿ

3

ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಮುಸ್ಲಿಂ ಖಾಸಗಿ ಶಾಲಾ ಮುಖ್ಯಸ್ಥ,ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆಅತ್ಯಾಚಾರಗೈದ ಘಟನೆ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಖಂಡಿಸಿ, ಉಘ್ರ ಶಿಕ್ಷೆಗೆ ಆಗ್ರಹಿಸಿ ತಾಲೂಕಿನ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಮಂಗಳವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರೆಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.

ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ.

ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ,ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೊಂದಿಗೆ ಚರ್ಚಿಸಿ ಸೋಮವಾರ ಸಾಯಂಕಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್ಸೆ ವಿಶ್ವನಾಥ ಮುದರೆಡ್ಡಿ ಹಾಗೂ ಅವರ ತಂಡ ಆರೋಪಿಯನ್ನು ಸೋಮವಾರ ರಾತ್ರಿ ಬಂದಿಸಿದ್ದಾರೆ.

ಈ ವಿಷಯ ತಾಲೂಕಿನಾದ್ಯಂತ ಹರಡಿದ್ದು, ಮಂಗಳವಾರ ಬೆಳಿಗ್ಗೆ ಬಂಜಾರಾ ಸಮುದಾಯ ಸೇರದಂತೆ ಪಟ್ಟಣದ ಎಲ್ಲ ಸಮುದಾಯ ಹಾಗೂ ಎಲ್ಲ ಸಂಘಟನೆಗಳು ಸೇರಿಕೊಂಡು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಟ್ಟಣ ಬಿಗುವಿನಿಂದ ಕೂಡಿದ್ದು, ಮುಂಜಾಗ್ರತೆಗಾಗಿ ಬಿಇಓ ವೀರಣ್ಣ ಬೊಮ್ಮನಳ್ಳಿ ಸ್ಥಳಿಯ ಶಾಲೆಗಳಿಗೆ ರಜೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...

ಎಸ್ಐಟಿ ಮುಖ್ಯಸ್ಥರ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರದ ಸೇವೆಗೆ...