ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಹಾಜಿ ಮಲಂಗ ಗಣಿಯಾರ್ ಯಡ್ರಾಮಿಯಲ್ಲಿ ಉದ್ವಿಗ್ನ ಸ್ಥಿತಿ

64

ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಮುಸ್ಲಿಂ ಖಾಸಗಿ ಶಾಲಾ ಮುಖ್ಯಸ್ಥ,ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆಅತ್ಯಾಚಾರಗೈದ ಘಟನೆ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಖಂಡಿಸಿ, ಉಘ್ರ ಶಿಕ್ಷೆಗೆ ಆಗ್ರಹಿಸಿ ತಾಲೂಕಿನ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಮಂಗಳವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರೆಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.

ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ.

ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ,ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೊಂದಿಗೆ ಚರ್ಚಿಸಿ ಸೋಮವಾರ ಸಾಯಂಕಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್ಸೆ ವಿಶ್ವನಾಥ ಮುದರೆಡ್ಡಿ ಹಾಗೂ ಅವರ ತಂಡ ಆರೋಪಿಯನ್ನು ಸೋಮವಾರ ರಾತ್ರಿ ಬಂದಿಸಿದ್ದಾರೆ.

ಈ ವಿಷಯ ತಾಲೂಕಿನಾದ್ಯಂತ ಹರಡಿದ್ದು, ಮಂಗಳವಾರ ಬೆಳಿಗ್ಗೆ ಬಂಜಾರಾ ಸಮುದಾಯ ಸೇರದಂತೆ ಪಟ್ಟಣದ ಎಲ್ಲ ಸಮುದಾಯ ಹಾಗೂ ಎಲ್ಲ ಸಂಘಟನೆಗಳು ಸೇರಿಕೊಂಡು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಟ್ಟಣ ಬಿಗುವಿನಿಂದ ಕೂಡಿದ್ದು, ಮುಂಜಾಗ್ರತೆಗಾಗಿ ಬಿಇಓ ವೀರಣ್ಣ ಬೊಮ್ಮನಳ್ಳಿ ಸ್ಥಳಿಯ ಶಾಲೆಗಳಿಗೆ ರಜೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...