ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ ಹೈದರಾಬಾದ್ ಪೊಲೀಸ್

3

“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು.

ನೆಚ್ಚಿನ ನಟನನ್ನು ನೋಡಲು ಅಲ್ಲಿ ನೆರೆದಿದ್ದ ಜನರು ಮುಗಿಬಿದ್ದ ಪರಿಣಾಮ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು.


ಥಿಯೇಟರ್ ನಲ್ಲಿ ಸಾವಿಗೀಡಾದ ಮಹಿಳಾ ಕುಟುಂಬಕ್ಕೆ  ನೆರವು ಘೋಷಣೆ ಘಟನೆಯ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅಷ್ಟೇ ಅಲ್ಲದೇ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ಮಾಡದ, ಜನದಟ್ಟನೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಸಂಧ್ಯಾ ಥಿಯೇಟರ್ ನ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, “ಥಿಯೇಟರ್‌ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಥಿಯೇಟರ್ ಆಡಳಿತಕ್ಕೆ ಅವರ ಆಗಮನದ ಬಗ್ಗೆ ತಿಳಿದಿದ್ದರೂ ಸಹ ನಟ ಮತ್ತು ಅವರ ತಂಡಕ್ಕೆ ಪ್ರತ್ಯೇಕ ಪ್ರವೇಶ ಅಥವಾ ನಿರ್ಗಮನವಿಲ್ಲ ಎಂದು ಉನ್ನತ ಪೋಲೀಸ್ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಅತಿ ಹೆಚ್ಚು ದಿನಗಳ ಕಾಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ ಅವರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

“ದೆಹಲಿಯಲ್ಲಿ ಇಂದು ಮಂಗಳವಾರ ನಡೆದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಅಮಿತ್ ಶಾ ಅವರನ್ನು ಶ್ಲಾಘಿಸಿದ ಪ್ರಧಾನಿ...

ಇಸ್ಲಾಂಗೆ ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ ಭಾಗ್ಯಶ್ರೀ ಹತ್ಯೆ ಮಾಡಿದ ಶೇಖ್ ರಯೀಸ್

ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...