ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ ಹೈದರಾಬಾದ್ ಪೊಲೀಸ್

40

“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು.

ನೆಚ್ಚಿನ ನಟನನ್ನು ನೋಡಲು ಅಲ್ಲಿ ನೆರೆದಿದ್ದ ಜನರು ಮುಗಿಬಿದ್ದ ಪರಿಣಾಮ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು.


ಥಿಯೇಟರ್ ನಲ್ಲಿ ಸಾವಿಗೀಡಾದ ಮಹಿಳಾ ಕುಟುಂಬಕ್ಕೆ  ನೆರವು ಘೋಷಣೆ ಘಟನೆಯ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅಷ್ಟೇ ಅಲ್ಲದೇ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ಮಾಡದ, ಜನದಟ್ಟನೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಸಂಧ್ಯಾ ಥಿಯೇಟರ್ ನ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, “ಥಿಯೇಟರ್‌ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಥಿಯೇಟರ್ ಆಡಳಿತಕ್ಕೆ ಅವರ ಆಗಮನದ ಬಗ್ಗೆ ತಿಳಿದಿದ್ದರೂ ಸಹ ನಟ ಮತ್ತು ಅವರ ತಂಡಕ್ಕೆ ಪ್ರತ್ಯೇಕ ಪ್ರವೇಶ ಅಥವಾ ನಿರ್ಗಮನವಿಲ್ಲ ಎಂದು ಉನ್ನತ ಪೋಲೀಸ್ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...