ಕಲ್ಬುರ್ಗಿ ಜೈಲಿನಲ್ಲಿರುವ ನಟೋರಿಯಸ್ ಕೈದಿಗಳಿಗೆ ಮತ್ತು ಭ್ರಷ್ಟ ಸಿಬ್ಬಂದಿಗಳಿಗೆ ಸಿಂಹಸ್ವಪ್ನರಾದ ದಕ್ಷ ಅಧಿಕಾರಿ ಗುಲ್ಬರ್ಗ ಜೈಲುಅಧೀಕ್ಷಕಿ ಅನಿತಾ ಆರ್

51

ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿರುವ ಗುಲ್ಬರ್ಗ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ನೂತನವಾಗಿ ಕಾರಾಗೃಹ ಅದೀಕ್ಷಕಿಯಾಗಿ ಅಧಿಕಾರ ಸ್ವೀಕರಿಸಿದ ಅನಿತಾ ಆರ್ ಅವರು ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗಳನ್ನು ನಿಲ್ಲಿಸಿ

ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಂಡ ಪರಿಣಾಮ ಜೈಲಿನಲ್ಲಿದ್ದ ಹಲವು ಭ್ರಷ್ಟ ಅಧಿಕಾರಿಗಳು ಹಾಗೂ ನಟೋರಿಯಸ್ ಕೈದಿಗಳು ಸೇರಿಕೊಂಡು ಇವರನ್ನು ಬ್ಲಾಕ್ ಮೇಲ್ ಮಾಡುವ ಷಡ್ಯಂತರ ಕೂಡ ನಡೆದಿತ್ತು

ಇದರ ವಿರುದ್ಧ ದಕ್ಷ ಪ್ರಾಮಾಣಿಕ ಅಧಿಕಾರಿ ಅನಿತಾ ರವರಿಗೆ ಬೆಂಬಲವಾಗಿ ಕಲ್ಬುರ್ಗಿಯ ಹಿಂದೂ ಜಾಗೃತಿ ಸೇನೆ ಹಾಗೂ ಇತರ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಜೈಲಿನಲ್ಲಿ ಹಲವಾರು ವರ್ಷಗಳಿಂದ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸುತ್ತಿರುವ

ಸ್ಥಳೀಯ ಸಿಬ್ಬಂದಿಗಳು ಇಂಥ ಅಕ್ರಮ ಚಟುವಟಿಕೆಗಳಿಗೆ ಕಾರಣಿಕರ್ತರಾಗಿರುವುದನ್ನು ಪರಿಗಣಿಸಿ ಅಂತವರನ್ನು ಇಲ್ಲಿಂದ ಬೇರೆ ಜೈಲುಗಳಿಗೆ ವರ್ಗಾವಣೆ ನಡೆಸುವಂತೆ ಜೈಲ್ ನಲ್ಲಿರುವ ನಟೋರಿಯಸ್ ಕೈದಿಗಳನ್ನ ಬೇರೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದ್ದರು

ಅದರಂತೆ ಈಗಾಗಲೇ ಈ ಷಡ್ಯಂತರ ನಡೆಸಿದ ಕೆಲವು ನಟೋರಿಯಸ್ ಖೈದಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ. ಅದಾಗಿಯೂ ಕೂಡ ಪೊಲೀಸ ಇಲಾಖೆ ಅಥವಾ ಬಂದಿಖಾನೆ ಇಲಾಖೆಗಳಲ್ಲಿ ಮೂರು ವರ್ಷಗಳಂತೆ ಹೆಚ್ಚು ಯಾರು ಕೂಡ ಒಂದೇ ಕಡೆಯಲ್ಲಿ ಸೇವೆ ಸಲ್ಲಿಸುವುದನ್ನು ಬದಲಾಯಿಸಿ ಬೇರೆ ಕಡೆ ವರ್ಗಾವಣೆಯಾಗುವಂತೆ ಸರಕಾರ ಆದೇಶ ಹೊರಡಿಸಿತ್ತು

ಆದರೆ ಗುಲ್ಬರ್ಗ ಜೈಲಿನಲ್ಲಿ ಸಿಬ್ಬಂದಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವ್ಯಕ್ತಿಗಳು ಇಲ್ಲಿನ ಸ್ಥಳೀಯರಾಗಿದ್ದು ಕಳೆದ 10 ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸುತ್ತ ಸ್ಥಳೀಯ ಪ್ರಭಾವ ಬಳಸಿಕೊಂಡು ಜೈಲಿನಲ್ಲಿರುವ ಕೈದಿಗಳಿಗೆ ಬೇಕು ಬೇಡವಾದ ಎಲ್ಲಾ ಸೌಲಭ್ಯಗಳನ್ನು ನೀಡುತ್ತಾ ಹಣ ಮಾಡಿಕೊಂಡಿರುವ ಇವರು ಎಲ್ಲಿಯವರೆಗೆ ಪ್ರಭಾವಿಗಳೆಂದರೆ

ದಕ್ಷ ಅಧಿಕಾರಿಗಳ ವಿರುದ್ಧ ಜೈಲ್ ನಲ್ಲಿರುವ ಕೈದಿಗಳ ಮುಖಾಂತರ ಪ್ರತಿಭಟನೆ ನಡೆಸಿ ದಕ್ಷ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿಸುವಷ್ಟು ಪ್ರಭಾವಿಗಳಾಗಿದ್ದಾರೆ. ಆದ್ದರಿಂದ ಹಲವಾರು ವರ್ಷಗಳಿಂದ ಇದೇ ಜೈಲಿನಲ್ಲಿ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳೀಯರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ...

ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ...

ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ಟರ್ ಇಂಡಿಯಾ...

ಎಚ್ಎಎಲ್ ನಿರ್ಮಿತ ತೇಜಸ್ ಮಾರ್ಕ್- 1ಎ ಫೈಟರ್ ಜೆಟ್ ಭಾರತೀಯ ಸೇನಾ ಬತ್ತಳಿಕೆಗೆ ಸೇರಲು ಸಿದ್ಧತೆ 

ಬೆಂಗಳೂರು: ಮುಂದಿನ ತಿಂಗಳು ಎಚ್‌ಎಎಲ್ ತಾನು ನಿರ್ಮಿಸಿದ 2 ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ಗಳನ್ನು ಭಾರತೀಯ...