ಬೆಳಗಾವಿ ಚಳಿಗಾಲದ ಅಧಿವೇಶನ ವಿರೋಧಿಸಿ ಎಂಇಎಸ್ ಪ್ರತಿಭಟನೆ ಮುಖಂಡರ ಬಂಧನ

47

“ಬೆಳಗಾವಿಯಲ್ಲಿ ಪ್ರತಿ ಬಾರಿ ಅಧಿವೇಶನ ನಡೆಯುವಾಗಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕ್ಯಾತೆ ತೆಗೆಯುವುದು ಸಾಮಾನ್ಯವಾಗಿ ಹೋಗಿದ್ದು, ಈ ಬಾರಿಯೂ ಸಂಭಾಜಿ ವೃತ್ತದ ಬಳಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿವೇಶನಕ್ಕೆ ಒಂದು ದಿನ ಮುಂಚೆಯೇ ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ಮುಂದಾಗಿತ್ತು.

ಈ ಹಿನ್ನೆಲೆಯಲ್ಲಿ ಗೊಂದಲಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಮಹಾಮೇಳಾವಕ್ಕೆ ಬ್ರೇಕ್ ಹಾಕಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಅವರು ಈ ಭಾಗದಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 9 ರಿಂದ 20 ವರೆಗೆ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಬೆಳಗಾವಿಯ ಟಿಳಕವಾಡಿ, ಕ್ಯಾಂಪ್, ಶಹಾಪೂರ, ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ವ್ಯಾಕ್ಸಿನ್ ಡಿಪೋ ಲೇಲೆ ಮೈದಾನ, ಧರ್ಮವೀರ ಸಂಭಾಜಿ ವೃತ್ತ, ಸಂಭಾಜಿ ಉದ್ಯಾನ ಹಾಗೂ ಶಿವಾಜಿ ಉದ್ಯಾನ ಭಾಗದಲ್ಲಿ ಮಹಾಮೇಳಾವ್ ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...