ದೆಹಲಿ ಅತಿಶಿ ಸರಕಾರದಿಂದ ಮಹಿಳಾ ಸಮ್ಮಾನ್ ಯೋಜನೆ ಜಾರಿಗೆ ಮಹಿಳೆಯರ ಖಾತೆಗೆ 1000 ರೂಪಾಯಿ ನೀಡಲು ಸಚಿವ ಸಂಪುಟ ಅನುಮೋದನೆ

47
ದೆಹಲಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1000 ರೂ.: ಚುನಾವಣೆ ಬಳಿಕ 2100 ರೂಪಾಯಿಗೆ ಏರಿಕೆ

2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.


: 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.

ದೆಹಲಿ ಕ್ಯಾಬಿನೆಟ್ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ಅನುಮೋದನೆ ನೀಡಿದ್ದು ಅದರಂತೆ ದೆಹಲಿಯ ಮಹಿಳೆಯರು ಪ್ರತಿ ತಿಂಗಳು 1000 ರೂಪಾಯಿ ಪಡೆಯಲಿದ್ದಾರೆ.

ದೆಹಲಿ ಸಚಿವ ಸಂಪುಟದಿಂದ ಈ ಯೋಜನೆಗೆ ಅನುಮೋದನೆ ಪಡೆದ ನಂತರ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಅತಿಶಿ ಮತ್ತು ಪಕ್ಷದ ಹಿರಿಯ ನಾಯಕರೊಂದಿಗೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು

ಇಂದು ನಾನು ದೆಹಲಿಯ ಜನರಿಗೆ ಎರಡು ದೊಡ್ಡ ಘೋಷಣೆಗಳನ್ನು ಮಾಡಲು ಬಂದಿದ್ದೇನೆ ಎಂದು ಹೇಳಿದರು. ಎರಡೂ ಘೋಷಣೆಗಳು ಮಹಿಳೆಯರಿಗೆ. ಪ್ರತಿ ಮಹಿಳೆಗೆ 1000 ರೂ ನೀಡುವುದಾಗಿ ಭರವಸೆ ನೀಡಿದ್ದೆ.

ಇಂದು ಬೆಳಗ್ಗೆ ಅತಿಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಲಾಯಿತು. ಈಗ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಿದೆ ಎಂದರು.

ಮಹಿಳಾ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 10-15 ದಿನಗಳಲ್ಲಿ ಚುನಾವಣೆ ದಿನಾಂಕ ಘೋಷಿಸಲಾಗುತ್ತದೆ. ಆದ್ದರಿಂದ ಖಾತೆಗೆ ಹಣವನ್ನು ವರ್ಗಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಹಣದುಬ್ಬರದಿಂದಾಗಿ 1000 ರೂಪಾಯಿ ಸಾಕಾಗುವುದಿಲ್ಲ ಎಂದು ಕೆಲವು ಮಹಿಳೆಯರು ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ನೋಂದಣಿ ಆರಂಭವಾಗಲಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ಸರ್ಕಾರ ರಚಿಸಿದರೆ, ದೆಹಲಿ ಸರ್ಕಾರವು ಮಹಿಳೆಯರಿಗೆ ನೀಡುವ 1000 ರೂ.ಗಳನ್ನು ತಿಂಗಳಿಗೆ 2100 ರೂ.ಗೆ ಹೆಚ್ಚಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿ ಸರ್ಕಾರದ ಅನುಮೋದನೆಯ ನಂತರ, ಈಗ ಈ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯ ಅಗತ್ಯವಿರುತ್ತದೆ. ಅದರ ನಂತರವೇ ಅದನ್ನು ಕಾರ್ಯಗತಗೊಳಿಸಬಹುದು.

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ದೆಹಲಿ ಸರ್ಕಾರದ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ.

ಈ ಯೋಜನೆಗಾಗಿ ದೆಹಲಿ ಸರ್ಕಾರವು ಹಣಕಾಸು ವರ್ಷಕ್ಕೆ 2000 ಕೋಟಿ ರೂಪಾಯಿಗಳ ಬಜೆಟ್ ಅನ್ನು ನಿಗದಿಪಡಿಸಿದೆ.

ದೆಹಲಿ ಸರ್ಕಾರದ ಈ ಯೋಜನೆಯ ಪ್ರಯೋಜನವು ಸರ್ಕಾರಿ ನೌಕರರಲ್ಲದ ಅಥವಾ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿರುವ ಮಹಿಳೆಯರಿಗೆ ಲಭ್ಯವಿರುತ್ತದೆ.

ಇದಲ್ಲದೇ ಬೇರೆ ಯಾವುದೇ ಪಿಂಚಣಿ ಪಡೆಯದವರಿಗೂ ಈ ಹಣವನ್ನು ನೀಡಲಾಗುವುದು. ಮಹಿಳೆಯರು ಆಧಾರ್ ಕಾರ್ಡ್‌ನಿಂದ ಬ್ಯಾಂಕ್ ಖಾತೆಗೆ ಮಾಹಿತಿ ನೀಡಬೇಕು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...