ರಾಜಕೀಯ ಪಕ್ಷದ ಮುಖಂಡನ ಅಕ್ರಮ ಮರಳು ಸಾಗಟ ಟಿಪ್ಪರ್ ಬೈಕ್ ಗೆ ಡಿಕ್ಕಿ ಓರ್ವ  ಅಮಾಯಕ ಬಲಿ ಇನ್ನೋರ್ವ ನ ಸ್ಥಿತಿ ಗಂಭೀರ

49

ಅಕ್ರಮ ಮರಳು ಸಾಗಾಟ ವಾಹನ ಡಿಕ್ಕಿ ಓರ್ವ  ಅಮಾಯಕ ಬಲಿ  ಇನ್ನೋರ್ವ  ನ ಸ್ಥಿತಿ  ಗಂಭೀರ ಆಸ್ಪತ್ರೆಗೆ ದಾಖಲು

ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಮರಳು ಸಾಗಾಟದ ಟಿಪ್ಪರ್‌ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದೆ

ಘಟನೆಯಲ್ಲಿ ಬೈಕ್‌ ಸವಾರ ಕಾರವಾರ ಮೂಲದ ವ್ಯಕ್ತಿ ಮೃತಪಟ್ಟರೆ, ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಘಟನೆ ಶುಕ್ರವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದ್ದು, ಗಾಯಾಳು ಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು.

ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...