ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕೆನ್ನುವ ಹರೀಶ್ ಪೂಂಜಾ ಅರಣ್ಯ ಭೂಮಿಯಲ್ಲಿರುವ ಅಕ್ರಮ ಗಣಿಗಾರಿಕೆ ಹಾಗೂ ಹೋಂಸ್ಟೇಗಳನ್ನು ತೆರವು ಮಾಡಿಸಲಿ : ನವೀನ್ ಸಾಲಿಯಾನ್

1

ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ನಾಲಾಯಕ್ ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇ ಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ :ನವೀನ್ ಸಾಲಿಯಾನ್

ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ರಾಜಕಾರಣಿಗಳು ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ ಅಕ್ರಮ ಗಣಿಗಾರಿಕೆ ಮಾಡಿ ಪರಿಸರ, ಅರಣ್ಯ ನಾಶ ಪಡಿಸುತ್ತಿರು ದಂದೆಕೋರರನ್ನು ಮಟ್ಟಹಾಕಲು ಪ್ರಯತ್ನ ಮಾಡುವುದನ್ನು ಬಿಟ್ಟು ಇಂಥ ಬಾಲಿಶ ಹೇಳಿಕೆ ನೀಡುವುದು ತರವಲ್ಲ.

ಭೂಮಿ ಖಾಲಿ ಮನುಷ್ಯರಿಗಷ್ಟೇ ಅಲ್ಲ,ಇದು ಎಲ್ಲಾ ಜೀವಿಗಳಿಗೂ ಸೇರಿದ್ದು ಎನ್ನುದನ್ನ ಹರೀಶ್ ಪೂಂಜಾ ಮೊದಲು ಅರಿಯಬೇಕು,ಬರೀ ಪ್ರಚಾರದ ತೆವಲಿಗೋಸ್ಕರ ಬೇಕಾಬಿಟ್ಟಿ ಮಾತಾಡುವುದನ್ನು ಜನರು ಗಮನಿಸುತ್ತಿದ್ದಾರೆ

. ತಾನು ಸಮಾಜದ ಜವಾಬ್ದಾರಿ ಹೊತ್ತ ಜನಪ್ರತಿನಿಧಿ ಎಂದು ಗಮನದಲ್ಲಿರಬೇಕು.
ಪ್ರಾಣಿಗಳನ್ನು ಗುಂಡಿಕ್ಕಿ ಕೊಲ್ಲುವುದು ಕಾಡಾನೆ ಹಳ್ಳಿಗೆ ಬರುವ ಸಮಸ್ಯೆಗಳಿಗೆ ಪರಿಹಾರವಲ್ಲ, ನೂರು 150 ವರ್ಷಗಳಿಂದ ಆನೆಗಳು ತಿರುಗಾಡುತ್ತಿದ್ದ ದಾರಿಯಲ್ಲಿ ಆನೆಗಳು ಬೇರೆ ಬೇರೆ ಅರಣ್ಯಗಳಿಗೆ ಸಂಚರಿಸುತ್ತವೆ ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೆ ತಿಳಿದ ಜ್ಞಾನ

ಸ್ಥಳಗಳಲ್ಲಿ ಮನೆಗಳ ನಿರ್ಮಿಸಿ ಅಕ್ರಮ ಹೋಂ ಸ್ಟೇ ಗಳನ್ನು ಕಟ್ಟಿ ಅವುಗಳ ಸಂಚಾರಕ್ಕೆ ಅಡ್ಡಿ ಮಾಡಿದ್ದು ಪ್ರಭಾವಿಗಳೇ ಹೊರತು ಸಾಮಾನ್ಯ ಜನರಲ್ಲ ಎಂಬುದನ್ನು ಹರೀಶ್ ಪೂಂಜಾ ಅವರು ಅರ್ಥ ಮಾಡಿಕೊಳ್ಳಬೇಕು

ಅರಣ್ಯ ಇಲಾಖೆಯ ಅಧಿಕಾರಿಗಳ ಸಮಕ್ಷಮದಲ್ಲಿ ಚರ್ಚೆ ಮಾಡಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುದು ಉತ್ತಮ
ಕಾಡುಪ್ರಾಣಿಗಳ ಬಗ್ಗೆ ಕಡು ಕ್ರೂರ ರೀತಿಯ ಹೇಳಿಕೆ ನೀಡಿರುವುದು ಶಾಸಕ ಸ್ಥಾನಕ್ಕೆ ಶೋಭೆ ತರುವುದಿಲ್ಲ,ಈ ರೀತಿಯ ಹೇಳಿಕೆ ನೀಡಿರುವುದುನ್ನು ಹಿಂಪಡೆದು ಸಾರ್ವಜನಿಕ ವಲಯದಲ್ಲಿ ಕ್ಷಮೆ ಕೇಳಬೇಕು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...