ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕೆನ್ನುವ ಹರೀಶ್ ಪೂಂಜಾ ಅರಣ್ಯ ಭೂಮಿಯಲ್ಲಿರುವ ಅಕ್ರಮ ಗಣಿಗಾರಿಕೆ ಹಾಗೂ ಹೋಂಸ್ಟೇಗಳನ್ನು ತೆರವು ಮಾಡಿಸಲಿ : ನವೀನ್ ಸಾಲಿಯಾನ್

70

ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ನಾಲಾಯಕ್ ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇ ಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ :ನವೀನ್ ಸಾಲಿಯಾನ್

ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ರಾಜಕಾರಣಿಗಳು ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ ಅಕ್ರಮ ಗಣಿಗಾರಿಕೆ ಮಾಡಿ ಪರಿಸರ, ಅರಣ್ಯ ನಾಶ ಪಡಿಸುತ್ತಿರು ದಂದೆಕೋರರನ್ನು ಮಟ್ಟಹಾಕಲು ಪ್ರಯತ್ನ ಮಾಡುವುದನ್ನು ಬಿಟ್ಟು ಇಂಥ ಬಾಲಿಶ ಹೇಳಿಕೆ ನೀಡುವುದು ತರವಲ್ಲ.

ಭೂಮಿ ಖಾಲಿ ಮನುಷ್ಯರಿಗಷ್ಟೇ ಅಲ್ಲ,ಇದು ಎಲ್ಲಾ ಜೀವಿಗಳಿಗೂ ಸೇರಿದ್ದು ಎನ್ನುದನ್ನ ಹರೀಶ್ ಪೂಂಜಾ ಮೊದಲು ಅರಿಯಬೇಕು,ಬರೀ ಪ್ರಚಾರದ ತೆವಲಿಗೋಸ್ಕರ ಬೇಕಾಬಿಟ್ಟಿ ಮಾತಾಡುವುದನ್ನು ಜನರು ಗಮನಿಸುತ್ತಿದ್ದಾರೆ

. ತಾನು ಸಮಾಜದ ಜವಾಬ್ದಾರಿ ಹೊತ್ತ ಜನಪ್ರತಿನಿಧಿ ಎಂದು ಗಮನದಲ್ಲಿರಬೇಕು.
ಪ್ರಾಣಿಗಳನ್ನು ಗುಂಡಿಕ್ಕಿ ಕೊಲ್ಲುವುದು ಕಾಡಾನೆ ಹಳ್ಳಿಗೆ ಬರುವ ಸಮಸ್ಯೆಗಳಿಗೆ ಪರಿಹಾರವಲ್ಲ, ನೂರು 150 ವರ್ಷಗಳಿಂದ ಆನೆಗಳು ತಿರುಗಾಡುತ್ತಿದ್ದ ದಾರಿಯಲ್ಲಿ ಆನೆಗಳು ಬೇರೆ ಬೇರೆ ಅರಣ್ಯಗಳಿಗೆ ಸಂಚರಿಸುತ್ತವೆ ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೆ ತಿಳಿದ ಜ್ಞಾನ

ಸ್ಥಳಗಳಲ್ಲಿ ಮನೆಗಳ ನಿರ್ಮಿಸಿ ಅಕ್ರಮ ಹೋಂ ಸ್ಟೇ ಗಳನ್ನು ಕಟ್ಟಿ ಅವುಗಳ ಸಂಚಾರಕ್ಕೆ ಅಡ್ಡಿ ಮಾಡಿದ್ದು ಪ್ರಭಾವಿಗಳೇ ಹೊರತು ಸಾಮಾನ್ಯ ಜನರಲ್ಲ ಎಂಬುದನ್ನು ಹರೀಶ್ ಪೂಂಜಾ ಅವರು ಅರ್ಥ ಮಾಡಿಕೊಳ್ಳಬೇಕು

ಅರಣ್ಯ ಇಲಾಖೆಯ ಅಧಿಕಾರಿಗಳ ಸಮಕ್ಷಮದಲ್ಲಿ ಚರ್ಚೆ ಮಾಡಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುದು ಉತ್ತಮ
ಕಾಡುಪ್ರಾಣಿಗಳ ಬಗ್ಗೆ ಕಡು ಕ್ರೂರ ರೀತಿಯ ಹೇಳಿಕೆ ನೀಡಿರುವುದು ಶಾಸಕ ಸ್ಥಾನಕ್ಕೆ ಶೋಭೆ ತರುವುದಿಲ್ಲ,ಈ ರೀತಿಯ ಹೇಳಿಕೆ ನೀಡಿರುವುದುನ್ನು ಹಿಂಪಡೆದು ಸಾರ್ವಜನಿಕ ವಲಯದಲ್ಲಿ ಕ್ಷಮೆ ಕೇಳಬೇಕು.

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...