ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

47

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಮೂವರು ಆರೋಪಿಗಳನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮೇ 7 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು....

ಪಂಚರಾಜ್ಯ ಚುನಾವಣೆ ಪಶ್ಚಿಮ ಬಂಗಾಳ ಅಸ್ಸಾಂ, ಬಿಜೆಪಿ ಕೇರಳ ಯುಡಿಎಫ್ ತಮಿಳುನಾಡು ನಟ ವಿಜಯ್ ನೇತೃತ್ವದ ಟಿವಿಕೆ, ಪುದುಚೆರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ತಮಿಳುನಾಡಿನಲ್ಲಿ ನಟ...

ಅವಧಿಗಿಂತ ಮೊದಲೇ ಅಪ್ಪಳಿಸಲಿದೆ ಮುಂಗಾರು ಮಳೆ; ಅಂಡಮಾನ್ ಮತ್ತು ಕೇರಳಕ್ಕೆ ಶೀಘ್ರ ಆಗಮನ

ಬೆಂಗಳೂರು: ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ...