thekarnatakatoday.com
Karavali Karnataka

ರಕ್ತದಾನ ಮಹಾದಾನ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಿ ರಕ್ತ ಸಂಗ್ರಹಿಸಿ ಬಡ ಜನರಿಗೆ ನೆರವಾಗಿರುವುದು ಒಳ್ಳೆಯ ಕಾರ್ಯ:: ದಿನಕರ್ ಹೇರೂರು

ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ, ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ ರಕ್ತ ದಾನ ಶಿಬಿರವು ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ ವಠಾರದಲ್ಲಿ ನಡೆಯಿತು.

ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇವತ್ತು ಜಿಲ್ಲಾ ಸರಕಾರಿ ಆಸ್ಪತ್ರೆಯ ಜೊತೆ ಸೇರಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ, ಇದರಿಂದ ಜಿಲ್ಲಾಸ್ಪತ್ರೆಗೆ ಬರುವ ರಕ್ತದ ಅವಶ್ಯಕತೆ ಇರುವ ಬಡ ರೋಗಿಗಳಿಗೆ ಸಹಾಯವಾಗುತ್ತದೆ ಎಂದರು.

ಇನ್ನೊರ್ವ ಅತಿಥಿ ಸುನೀಲ್ ಸಾಲ್ಯಾನ್ ಕಡೆಕಾರ್ ಅವರು ಮಾತನಾಡಿ ಸಂಘ ಸಂಸ್ಥೆಗಳಿಂದ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಇಂತಾಹ ಸಾಮಾಜಿಕ ಕಾರ್ಯಕ್ರಮಗಳು ನಡೆದಾಗ ಸಂಘ ಸಂಸ್ಥೆಗಳ ಕೆಲಸಕ್ಕೆ ಹೆಚ್ಚಿನ ಅರ್ಥ ಬರುತ್ತದೆ ಎಂದರು.

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲ್ಯಾನ್ ಅವರು ಉಡುಪಿಯಲ್ಲಿ ಪ್ರಸ್ತುತ ರಕ್ತದ ಬೇಡಿಕೆ ಮತ್ತು ತಮ್ಮ ಸಂಸ್ಥೆ ಇದಕ್ಕಾಗಿ ಸ್ಪಂದಿಸುತ್ತಿರುವ ಬಗ್ಗೆ ತಿಳಿಸಿದರು.

ಜಿಲ್ಲಾ ರಕ್ತನಿಧಿ ವಿಭಾಗದ ಡಾ. ಕಾವ್ಯ, ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಜೆ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾದ ರಾಜೇಶ್ ಪಾಲನ್ ಸ್ವಾಗತಿಸಿದರು, ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರದ ಕಾರ್ಯದರ್ಶಿ ತಾರಾನಾಥ್ ಮೆಂಡನ್ ವಂದಿಸಿದರು.

ವಿಕಾಸ್ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.ಈ ಯಶಸ್ವಿ ರಕ್ತದಾನ ‌ಶಿಬಿರದಲ್ಲಿ 52 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.*

Related posts

ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಕಾರ್ಯಕರ್ತರ ಆಕ್ರೋಶ ಜಿಲ್ಲಾ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ???

The Karnataka Today

ಉಡುಪಿ ಎತ್ತ ಸಾಗುತ್ತಿದೆ ಕಾನೂನು ಸುವ್ಯವಸ್ಥೆ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಂದ  ಸಂತ್ರಸ್ತರ ಮನೆಗೆ ನುಗ್ಗಿ ದಾಂಧಲೆ

The Karnataka Today

ಪಡುಬಿದ್ರಿ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ  “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

The Karnataka Today

Leave a Comment