ರಕ್ತದಾನ ಮಹಾದಾನ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಿ ರಕ್ತ ಸಂಗ್ರಹಿಸಿ ಬಡ ಜನರಿಗೆ ನೆರವಾಗಿರುವುದು ಒಳ್ಳೆಯ ಕಾರ್ಯ:: ದಿನಕರ್ ಹೇರೂರು

1

ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ, ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ ರಕ್ತ ದಾನ ಶಿಬಿರವು ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ ವಠಾರದಲ್ಲಿ ನಡೆಯಿತು.

ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇವತ್ತು ಜಿಲ್ಲಾ ಸರಕಾರಿ ಆಸ್ಪತ್ರೆಯ ಜೊತೆ ಸೇರಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ, ಇದರಿಂದ ಜಿಲ್ಲಾಸ್ಪತ್ರೆಗೆ ಬರುವ ರಕ್ತದ ಅವಶ್ಯಕತೆ ಇರುವ ಬಡ ರೋಗಿಗಳಿಗೆ ಸಹಾಯವಾಗುತ್ತದೆ ಎಂದರು.

ಇನ್ನೊರ್ವ ಅತಿಥಿ ಸುನೀಲ್ ಸಾಲ್ಯಾನ್ ಕಡೆಕಾರ್ ಅವರು ಮಾತನಾಡಿ ಸಂಘ ಸಂಸ್ಥೆಗಳಿಂದ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಇಂತಾಹ ಸಾಮಾಜಿಕ ಕಾರ್ಯಕ್ರಮಗಳು ನಡೆದಾಗ ಸಂಘ ಸಂಸ್ಥೆಗಳ ಕೆಲಸಕ್ಕೆ ಹೆಚ್ಚಿನ ಅರ್ಥ ಬರುತ್ತದೆ ಎಂದರು.

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲ್ಯಾನ್ ಅವರು ಉಡುಪಿಯಲ್ಲಿ ಪ್ರಸ್ತುತ ರಕ್ತದ ಬೇಡಿಕೆ ಮತ್ತು ತಮ್ಮ ಸಂಸ್ಥೆ ಇದಕ್ಕಾಗಿ ಸ್ಪಂದಿಸುತ್ತಿರುವ ಬಗ್ಗೆ ತಿಳಿಸಿದರು.

ಜಿಲ್ಲಾ ರಕ್ತನಿಧಿ ವಿಭಾಗದ ಡಾ. ಕಾವ್ಯ, ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಜೆ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾದ ರಾಜೇಶ್ ಪಾಲನ್ ಸ್ವಾಗತಿಸಿದರು, ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರದ ಕಾರ್ಯದರ್ಶಿ ತಾರಾನಾಥ್ ಮೆಂಡನ್ ವಂದಿಸಿದರು.

ವಿಕಾಸ್ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.ಈ ಯಶಸ್ವಿ ರಕ್ತದಾನ ‌ಶಿಬಿರದಲ್ಲಿ 52 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.*

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...