ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಮಹಾಯತಿಯಲ್ಲಿ ಅಸಮಾಧಾನ ಸ್ಫೋಟ ಶಿವಸೇನೆ ಶಾಸಕ ರಾಜೀನಾಮೆ??

43

ಮಹಾರಾಷ್ಟ್ರದಲ್ಲಿ ಡಿ.15 ರಂದು ಸಂಪುಟ ವಿಸ್ತರಣೆ ಮಾಡಲಾಗಿದ್ದು, 39 ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.

ಖಾತೆ ಹಂಚಿಕೆಗೂ ಮೊದಲೇ ಸಂಪುಟ ವಿಸ್ತರಣೆ ಬಗ್ಗೆ ಮಹಾಯುತಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಶಿವಸೇನೆ ಶಾಸಕ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನರೇಂದ್ರ ಭೋಂಡೇಕರ್, ಶಿವಸೇನೆಯ ಉಪ ನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು.

ವಿದರ್ಭದಲ್ಲಿ 62 ಸ್ಥಾನಗಳ ಪ್ರದೇಶದಲ್ಲಿ ಮಹಾಯುತಿ ಮೈತ್ರಿ 47 ಸ್ಥಾನಗಳನ್ನು ಗೆದ್ದಿದೆ. ಭಂಡಾರ-ಪಾವನಿ ವಿಧಾನಸಭಾ ಕ್ಷೇತ್ರದ ಶಾಸಕ ನರೇಂದ್ರ ಭೋಂಡೇಕರ್ ವಿಧಾನಸಭೆಗೆ ರಾಜೀನಾಮೆ ನೀಡಿಲ್ಲ.

ಶಿವಸೇನೆಯಿಂದ ಮೂರು ಬಾರಿ ಶಾಸಕರಾಗಿದ್ದ ಭೋಂಡೇಕರ್ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು

. ಆದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಏಕನಾಥ್ ಶಿಂಧೆ, ಹಿರಿಯ ನಾಯಕರಾದ ಉದಯ್ ಸಾಮಂತ್ ಮತ್ತು ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಗೆ ಸಂದೇಶಗಳನ್ನು ಕಳುಹಿಸಿದ ನಂತರ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದು, ಪತ್ರಿಕೆಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೂತನ ಸಂಪುಟದಲ್ಲಿ ಉದಯ್ ಸಮಂತ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮೂರು ವಾರಗಳ ನಂತರ ನಾಗ್ಪುರದಲ್ಲಿ 39 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ಫಡ್ನವೀಸ್ ಇಂದು ತಮ್ಮ ಸಂಪುಟ ವಿಸ್ತರಣೆಯನ್ನು ಪೂರ್ಣಗೊಳಿಸಿದ್ದಾರೆ.

ಬಿಜೆಪಿಯಿಂದ 19 ಮಂದಿ ಶಿವಸೇನೆಯಿಂದ 11 ಮಂದಿ, ಎನ್ ಸಿಪಿಯಿಂದ 9 ಮಂದಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ಫಡ್ನವಿಸ್ ಹಾಗೂ ಇಬ್ಬರು ಡಿಸಿಎಂಗಳನ್ನು ಸೇರಿ ಒಟ್ಟು 42 ಮಂದಿ ಸಚಿವರಿದ್ದಾರೆ.

ತಮಗೆ ನೀಡಿದ್ದ ಭರವಸೆಯನ್ನು ಫಡ್ನವಿಸ್ ಪೂರ್ಣಗೊಳಿಸಿಲ್ಲ ಈ ಬಗ್ಗೆ ನಡ್ಡಾ ಹಾಗೂ ಅಮಿತ್ ಶಾ ಜೊತೆ ಮಾತನಾಡುತ್ತೇನೆ ಎಂದು ಭೋಂಡೇಕರ್ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...