ಆರ್ ಎಸ್ ಎಸ್ ಅಂತರ  ಧರ್ಮೀಯ  ವಿವಾಹಕ್ಕೆ ವಿರೋಧಿಯಲ್ಲ ಅದರ ಹೆಸರಿನಲ್ಲಿ  ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ :: ರತನ್ ಶಾರದಾ

39

“ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂತರಧರ್ಮೀಯ ವಿವಾಹಕ್ಕೆ ವಿರುದ್ಧವಾಗಿ ಇಲ್ಲ, ಆದರೆ ಮದುವೆ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ.

ಅಂತರಧರ್ಮೀಯ ವಿವಾಹವಾದ ಮಹಿಳೆಯರನ್ನು ಒತ್ತಾಯಪೂರ್ವಕವಾಗಿ ಪತಿಯ ಧರ್ಮಕ್ಕೆ ಮತಾಂತರ ಮಾಡಿಕೊಂಡು ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರ್ ಎಸ್ ಎಸ್ ರಾಷ್ಟ್ರೀಯ ಮಾಧ್ಯಮ ತಂಡದ ಸದಸ್ಯ ರತನ್ ಶಾರದಾ ಹೇಳಿದ್ದಾರೆ.

ಇವರು ಲವ್ ಜಿಹಾದ್ ಎಂಬ ವಿವಾದಾತ್ಮಕ ವಿಷಯದ ಮೇಲೆ ಆರ್ ಎಸ್ಎಸ್ 360 ಪುಸ್ತಕದ ಲೇಖಕ ಕೂಡ ಆಗಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಅಂತರಧರ್ಮೀಯ ಮದುವೆಯಲ್ಲಿ ಮಹಿಳೆಯರು ಮೋಸ ಹೋದ ಪ್ರಕರಣಗಳು ಸಾಕಷ್ಟಿವೆ.

ಹಲವು ಮದುವೆಗಳು ಇಂತವು ಯೋಜಿತ ಧರ್ಮ ಮತಾಂತರಗಳು. ವೈಯಕ್ತಿಕ ಕಾನೂನುಗಳನ್ನು ಹತ್ತಿಕ್ಕುವ ಸಾಮಾನ್ಯ ಕಾನೂನುಗಳು ನಮ್ಮಲ್ಲಿ ಬಲಿಷ್ಠವಾಗಬೇಕು ಎಂದರು.

ಜಾತಿ, ಧರ್ಮವನ್ನು ಬದಿಗೊತ್ತಿ ಅಭಿವೃದ್ಧಿಪರ ಮತ ಹಾಕಿದ್ದಾರೆ ಎಂಬುದನ್ನು ಇತ್ತೀಚಿನ ಬಿಹಾರ ಚುನಾವಣೆ ಸಾಬೀತುಪಡಿಸಿದೆ. ಜಾತ್ಯಾತೀತ ಪಕ್ಷಗಳ ರಾಜಕೀಯವನ್ನು ಜನರು ನೋಡಿ ತೀರ್ಮಾನ ಕೊಟ್ಟಿದ್ದು ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಡ ಅದು ಸಾಬೀತಾಗಲಿದೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...