ಆರ್ ಎಸ್ ಎಸ್ ಅಂತರ  ಧರ್ಮೀಯ  ವಿವಾಹಕ್ಕೆ ವಿರೋಧಿಯಲ್ಲ ಅದರ ಹೆಸರಿನಲ್ಲಿ  ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ :: ರತನ್ ಶಾರದಾ

49

“ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂತರಧರ್ಮೀಯ ವಿವಾಹಕ್ಕೆ ವಿರುದ್ಧವಾಗಿ ಇಲ್ಲ, ಆದರೆ ಮದುವೆ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ.

ಅಂತರಧರ್ಮೀಯ ವಿವಾಹವಾದ ಮಹಿಳೆಯರನ್ನು ಒತ್ತಾಯಪೂರ್ವಕವಾಗಿ ಪತಿಯ ಧರ್ಮಕ್ಕೆ ಮತಾಂತರ ಮಾಡಿಕೊಂಡು ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರ್ ಎಸ್ ಎಸ್ ರಾಷ್ಟ್ರೀಯ ಮಾಧ್ಯಮ ತಂಡದ ಸದಸ್ಯ ರತನ್ ಶಾರದಾ ಹೇಳಿದ್ದಾರೆ.

ಇವರು ಲವ್ ಜಿಹಾದ್ ಎಂಬ ವಿವಾದಾತ್ಮಕ ವಿಷಯದ ಮೇಲೆ ಆರ್ ಎಸ್ಎಸ್ 360 ಪುಸ್ತಕದ ಲೇಖಕ ಕೂಡ ಆಗಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಅಂತರಧರ್ಮೀಯ ಮದುವೆಯಲ್ಲಿ ಮಹಿಳೆಯರು ಮೋಸ ಹೋದ ಪ್ರಕರಣಗಳು ಸಾಕಷ್ಟಿವೆ.

ಹಲವು ಮದುವೆಗಳು ಇಂತವು ಯೋಜಿತ ಧರ್ಮ ಮತಾಂತರಗಳು. ವೈಯಕ್ತಿಕ ಕಾನೂನುಗಳನ್ನು ಹತ್ತಿಕ್ಕುವ ಸಾಮಾನ್ಯ ಕಾನೂನುಗಳು ನಮ್ಮಲ್ಲಿ ಬಲಿಷ್ಠವಾಗಬೇಕು ಎಂದರು.

ಜಾತಿ, ಧರ್ಮವನ್ನು ಬದಿಗೊತ್ತಿ ಅಭಿವೃದ್ಧಿಪರ ಮತ ಹಾಕಿದ್ದಾರೆ ಎಂಬುದನ್ನು ಇತ್ತೀಚಿನ ಬಿಹಾರ ಚುನಾವಣೆ ಸಾಬೀತುಪಡಿಸಿದೆ. ಜಾತ್ಯಾತೀತ ಪಕ್ಷಗಳ ರಾಜಕೀಯವನ್ನು ಜನರು ನೋಡಿ ತೀರ್ಮಾನ ಕೊಟ್ಟಿದ್ದು ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಡ ಅದು ಸಾಬೀತಾಗಲಿದೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...