ಸಂಸತ್ ನಲ್ಲಿ ಮಸೂದೆ ಬೆಂಬಲಿಸಲು ವಿಪ್ ಜಾರಿಯಾಗಿದ್ದರು ಮತದಾನದಲ್ಲಿ ಭಾಗವಹಿಸದ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು  ತನಿಖೆಗೆ ಮುಂದಾದ ಬಿಜೆಪಿ

38

ಮತದಾನದ ವೇಳೆ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರ ಗೈರು! ತನಿಖೆಗೆ ಮುಂದಾದ ಬಿಜೆಪಿ ಅಚ್ಚರಿ ಎಂದರೆ ವಿಪ್ ಹೊರತಾಗಿಯೂ ಆಡಳಿತಾರೂಢ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ ಗೈರು ಹಾಜರಾಗಿದ್ದರು. ಒಂದು ದೇಶ ಒಂದು ಚುನಾವಣೆ


ಒಂದು ದೇಶ ಒಂದುಚುನಾವಣೆ ಮಸೂದೆಯನ್ನು ಡಿ.17 ರಂದು ಸಂಸತ್ ನಲ್ಲಿ ಮಂಡಿಸಲಾಗಿದ್ದು ವಿಸ್ತೃತ ಚರ್ಚೆಗೆಂದು ಜಂಟಿ ಸದನ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಮಸೂದೆಯ ಪ್ರಸ್ತಾವನೆಗೆ ಮತದಾನ ನಡೆದಿದ್ದು ಈ ವೇಳೆ ಮಸೂದೆ ಪರವಾಗಿ 269 ಮತಗಳು ಬಂದಿದ್ದರೆ, 198 ಮತಗಳು ವಿರುದ್ಧವಾಗಿ ಚಲಾವಣೆಯಾಗಿವೆ.

ಅಚ್ಚರಿ ಎಂದರೆ ವಿಪ್ ಹೊರತಾಗಿಯೂ ಆಡಳಿತಾರೂಢ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ ಗೈರು ಹಾಜರಾಗಿದ್ದರು.

ಮಸೂದೆ ಮಂಡನೆ ವೇಳೆ ಸದನದಲ್ಲಿ ಹಾಜರಿರುವಂತೆ ಸಂಸದರಿಗೆ ವಿಪ್ ಜಾರಿ ಮಾಡಲಾಗಿತ್ತಾದರೂ, ಗೈರಾಗುವ ಮೂಲಕ ಸಂಸದರು ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಆದಾಗ್ಯೂ, ಹಲವು ಸಂಸದರು ವೈಯಕ್ತಿಕ ಮತ್ತು ಕೆಲಸಕ್ಕೆ ಸಂಬಂಧಿಸಿದ ಕಾರಣಗಳಿಂದಾಗಿ ತಮ್ಮ ಗೈರುಹಾಜರಿಯ ಬಗ್ಗೆ ಮುಂಚಿತವಾಗಿ ತಿಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. “ನಾವು ಖಂಡಿತವಾಗಿಯೂ ಅವರ ಅನುಪಸ್ಥಿತಿಯ ಹಿಂದಿನ ಕಾರಣಗಳನ್ನು ಪರಿಶೀಲಿಸುತ್ತಿದ್ದೇವೆ.

ಕೆಲವರಿಗೆ ನಿಜವಾದ ಕಾರಣಗಳಿವೆ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೇಂದ್ರ ಸಚಿವ ಸಿ ಆರ್ ಪಾಟೀಲ್ ಸೇರಿದಂತೆ ಕೆಲವು ಸಂಸದರು ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಮಾರಂಭದಲ್ಲಿ ತೊಡಗಿದ್ದರು ಎಂದು ಮೂಲಗಳು ತಿಳಿಸಿವೆ.


ಬಿಜೆಪಿ ಮಿತ್ರಪಕ್ಷಗಳ ನಾಲ್ಕೈದು ಸಂಸದರು ಮತದಾನದ ವೇಳೆ ಹಾಜರಿರಲಿಲ್ಲ, ಈ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮಂಗಳವಾರ 90 ನಿಮಿಷಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆಯಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕಾರ್ಯವಿಧಾನವನ್ನು ರೂಪಿಸುವ ಎರಡು ಮಸೂದೆಗಳನ್ನು ಮಂಡಿಸಲಾಯಿತು

. ಸಂವಿಧಾನ (129 ನೇ ತಿದ್ದುಪಡಿ) ಮಸೂದೆಯನ್ನು ಮೇಘವಾಲ್ ಅವರು ಮತಗಳ ವಿಭಜನೆಯ ನಂತರ ಲೋಕಸಭೆಯಲ್ಲಿ ಮಂಡಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...