thekarnatakatoday.com
News

ಸಿಟಿ ರವಿ ಆಕ್ಷೇಪಾರ್ಹಪದ ಬಳಸಿದ್ದಾರೆ ಅನ್ನೋದು ರೆಕಾರ್ಡ್ ಆಗಿಲ್ಲ ಆದರೆ ನಾಲ್ಕು ಜನ ಸಾಕ್ಷಿ ನುಡಿದಿದ್ದಾರೆ :: ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ

“ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನ್ಸತ್ತೆ ಎಂದು ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು. ನಾನು ಯಾರ ಪರವೂ ಇಲ್ಲ, ಎರಡು ಕಡೆ ಯೋಚನೆ ಮಾಡಿದ್ದೇನೆ.

ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗತ್ತೆ. ಜನ‌ ನಮ್ಮನ್ನು ನೋಡುತ್ತಾರೆ. ಶಾಸಕರು ನಡವಳಿಕೆ ತಿದ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು. ನಿನ್ನೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಇದೆಲ್ಲದಕ್ಕೂ ಮೂಲ ಕಾರಣವಾಯಿತು.

ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಕೂಡಾ ಪ್ರತಿಭಟನೆಗೆ ಇಳಿದಿದ್ದರಿಂದ, ಎರಡು ಪಕ್ಷಗಳ ನಡುವೆ ತೀವ್ರ ವಾಗ್ಯುದ್ದಕ್ಕೆ ಕಾರಣವಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ.ರವಿ ನಡುವೆ, ಮಾತಿನ ಚಕಮಕಿ ನಡೆದು ಆಕ್ಷೇಪಾರ್ಹ ಪದವನ್ನು ರವಿ ಬಳಸಿದರು ಎನ್ನುವುದು ಕಾಂಗ್ರೆಸ್ ಆರೋಪ.

Related posts

ವಕ್ಫ್ ವಿವಾದ: ಹಿಂಸಾತ್ಮಕ ತಿರುವು ಹಾವೇರಿ ಜಿಲ್ಲೆಯಲ್ಲಿ ಕಲ್ಲು ತೂರಾಟ, 32 ಮಂದಿ ಬಂಧನ

The Karnataka Today

ಮುಖ್ಯಮಂತ್ರಿ ಹುದ್ದೆಗಾಗಿ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬೆಂಬಲಿಗರಿಂದ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ

The Karnataka Today

ಉಡುಪಿ ಮಂಗಳೂರು ಕ್ರೀಡಾಂಗಣ ಮೇಲ್ದರ್ಜೆಗೇರಿಸಲು ತಲಾ ಮೂರು ಕೋಟಿ ಅನುದಾನ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today

Leave a Comment