ರಾಮಾಯಣ ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದಿಸಿದ ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

2

“ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿಯಾದರು.

ಇಂದು ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು. “ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ.

ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ

. ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೋಟ್ಯಂತರ ಹಿಂದೂಗಳ ನಂಬಿಕೆಯ ಪ್ರತೀಕವಾಗಿರುವ ‘ರಾಮಾಯಣ’ ಮತ್ತು ‘ಮಹಾಭಾರತ’ದ ಪುಸ್ತಕವನ್ನು ಕುವೈತ್‌ನಲ್ಲಿ ಪ್ರಧಾನಿ ಮೋದಿ ಹಿಡಿದುಕೊಂಡಿರುವ ಫೋಟೋ ಭಾರೀ ವೈರಲ್‌ ಆಗುತ್ತಿದೆ.

ಕುವೈತ್‌ನ ಅಮೀರ್, ಶೇಖ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌ ಜಬೇರ್‌ ಅಲ್‌ ಸಬ್ಹಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್‌ಗೆ ತೆರಳಿದ್ದಾರೆ. ಇದು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಭೇಟಿ ವೇಳೆ ಮೋದಿಯವರು ಅಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಜೊತೆಗೆ ಕುವೈತ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಈ ಭೇಟಿಯು ಭಾರತ ಮತ್ತು ಕುವೈತ್‌ ನಡುವಿನ ಬಹುಮುಖಿ ಸಂಬಂಧವನ್ನು ಬಲಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯೆಮೆನ್ ಗಲ್ಲು ಶಿಕ್ಷೆ ರದ್ದಾಗಿಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ...

ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್?: ಡ್ರೋನ್ ದಾಳಿಯಲ್ಲಿ ಉಲ್ಫಾ-ಐ ಕಮಾಂಡರ್ ನಯನ್ ಮೇಧಿ ಸೇರಿ 19 ಮಂದಿ ಸಾವು

ಮ್ಯಾನ್ಮಾರ್‌ನ ನಿಷೇಧಿತ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ULFA) ತನ್ನ ಪೂರ್ವ ಪ್ರಧಾನ ಕಚೇರಿಯ...

ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಪವಿತ್ರ ಸಿಂಗ್ ಬಟಾಲ ಬಂಧನ

“ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಪರ್ಕ ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಸಂಘಟನೆಯೊಂದಿಗೆ ಸಂಬಂಧ...

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್...