ಅಮಿತ್ ಶಾ ಅವರಿಗೆ ಹುಚ್ಚು ನಾಯಿ ಕಚ್ಚಿದೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

61

“ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, “ಅವರಿಗೆ ಹುಚ್ಚು ನಾಯಿ ಕಚ್ಚಿದೆ” ಎಂದು ಶನಿವಾರ ಕಿಡಿ ಕಾರಿದ್ದಾರೆ.

ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು, ದೇವರ ಹೆಸರು ಸಾವಿರ ಬಾರಿ ಜಪಿಸಿದರೆ ಏಳು ಜನ್ಮದಲ್ಲಿಯೂ ಸ್ವರ್ಗ ಪ್ರಾಪ್ತಿಯಾಗುತ್ತೋ ಇಲ್ಲವೋ ಗೊತ್ತಿಲ್ಲ.

ಆದರೆ ಅಂಬೇಡ್ಕರ್ ಅವರ ಹೆಸರು‌ ಹೇಳಿದರೆ ಈ ಜನ್ಮದಲ್ಲಿಯೇ ಸ್ವಾಭಿಮಾನದ ಬದುಕು ಸಿಗುತ್ತದೆ ಎಂದು ಹೇಳಿದರು.

ಏನ್ ಸಮಸ್ಯೆ ಅಂದ್ರೆ ಇವರ ಆಲೋಚನೆಯಲ್ಲಿ ಅಂಬೇಡ್ಕರ್ ಇಲ್ಲ. ಸಾಮಾಜಿಕ ಸಮಾನತೆ ಇಲ್ಲ. ಅಂಬೇಡ್ಕರ್ ಮತ್ತು ಬಸವ ತತ್ವಗಳು ಹೆಚ್ಚಾದಷ್ಟು ಆರ್‌ಎಸ್‌ಎಸ್ ಸಿದ್ಧಾಂತಗಳು ಕಡಿಮೆಯಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಸಿ.ಟಿ. ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ಬಗ್ಗೆ ಬಿಜೆಪಿಯವರು ಸತ್ಯಕ್ಕೆ ಜಯ, ಕಾಂಗ್ರೆಸ್ ಗೆ ಮುಖಭಂಗ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಮುಖಭಂಗ ಯಾಕಾಗುತ್ತದೆ?

ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ. ಕಾನೂನು ಕೇವಲ ಬಿಜೆಪಿಯವರಿಗೆ ಮಾತ್ರ ಗೊತ್ತಿಲ್ಲ ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...