thekarnatakatoday.com
National

ಬರಾಕ್ ಒಬಾಮಾ ಭಾಗವಹಿಸಬೇಕಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸ್ಪೋಟ ನಡೆಸಲು ಸಂಚುರೂಪಿಸಿದ್ದ ಭಟ್ಕಳದ ಮೂವರಿಗೆ ಹತ್ತು ವರ್ಷ ಜೈಲು ಶಿಕ್ಷೆ

“ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದ

ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಮತ್ತಿತರ ಆರೋಪಿಗಳಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್‌ಗೆ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ10 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ

. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಮೂವರು ಆರೋಪಿಗಳು ಪಾಕಿಸ್ತಾನದ ಸೂಚನೆಗಳನ್ನು ಪಾಲಿಸುತ್ತಿದ್ದರು ಎಂದು ವರದಿಯಾಗಿದೆ.

ನ್ಯಾಯಾಲಯ ಅಫಾಕ್‌ಗೆ 1.55 ಲಕ್ಷ ರೂಪಾಯಿ ಮತ್ತು ಸಬೂರ್ ಮತ್ತು ಹುಸೇನ್‌ಗೆ ತಲಾ 95,000 ರೂಪಾಯಿ ದಂಡ ವಿಧಿಸಿದೆ. ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಈ ಆದೇಶ ನೀಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿಎಂ ಗಂಗಾಧರ, ಸೆಕ್ಷನ್ 428 CrPC ಅಡಿಯಲ್ಲಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಬೇಕು, ತಲೆಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ಧದ ವಿಚಾರಣೆ ಮುಗಿಯುವವರೆಗೂ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಆದೇಶ ನೀಡಿದರು.

ಈ ಸಂಬಂಧ ನಗರದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಎಂಕೆ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು

Related posts

ಆಜಾನ್ ವೇಳೆ ಏರು ಧ್ವನಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಸೀದಿಯ ಇಮಾಮ್ ವಿರುದ್ಧ ಪ್ರಕರಣ ದಾಖಲು 

The Karnataka Today

ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆ ಆರೋಪ ನಿರಾಕರಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

The Karnataka Today

ಜಾರ್ಖಂಡ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಡುವುದಿಲ್ಲ ::ಮುಖ್ಯಮಂತ್ರಿ ಹೇಮಂತ್ ಸೊರೆನ್

The Karnataka Today

Leave a Comment