ಕೊಲೆ ಆರೋಪಿಗೆ ಜಾಮೀನು ನೀಡಲು  ಹೈಕೋರ್ಟ್  ನ್ಯಾಯಮೂರ್ತಿಗಳ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ  ವಕೀಲೇ ವಿರುದ್ಧ ಎಫ್ ಐ ಆರ್

47

“ಕೊಲೆ ಆರೋಪಿಗೆ ಜಾಮೀನು ಮಂಜೂರು ಮಾಡಲು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಅವರು ₹50 ಲಕ್ಷ ಲಂಚ ನಿರೀಕ್ಷಿಸುತ್ತಿದ್ದಾರೆ ಎಂದು ಕೊಲೆ ಆರೋಪಿಯ ತಾಯಿಗೆ ತಿಳಿಸಿದ್ದ ವಕೀಲೆ ಬಿ ಎಂ ದಯೀನಾ ಬಾನು ವಿರುದ್ದ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ವಂಚನೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಈ ಸಂಬಂಧ ಕ್ರಮಕೈಗೊಳ್ಳುವಂತೆ ಕೋರಿ ಥೆರೆಸಾ ಅವರು ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ದೂರು ನೀಡಿದ್ದರು. ಈ ಸಂಬಂಧ ಜಾಮೀನು ಕೋರಿರುವ ಅರ್ಜಿಯ ದಾಖಲೆ ಪಡೆದು ದಯೀನಾ ಬಾನು ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ನ್ಯಾಯಮೂರ್ತಿಗಳು ಆದೇಶಿಸಿದ್ದರು.

ಇದರ ಬೆನ್ನಿಗೇ ದಯೀನಾ ಬಾನು ವಿರುದ್ಧ ಮುಂದಿನ ಕ್ರಮಕ್ಕಾಗಿ ಹೈಕೋರ್ಟ್‌ನ ಕಾನೂನು ಘಟಕದ ಜಂಟಿ ರಿಜಿಸ್ಟ್ರಾರ್‌ ರಾಜೇಶ್ವರಿ ಅವರು ದೂರು ನೀಡಿದ್ದರು.

ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಿಳಿಸಿರುವಂತೆ ಥೆರೆಸಾ ಅವರ ಪುತ್ರ 24 ವರ್ಷದ ವಿಷ್ಣು ಅಲಿಯಾಸ್‌ ವಿಷ್ಣುದೇವನ್‌ ಅವರು ಮೂರು ವರ್ಷಗಳಿಂದ (ಕೊಲೆ ಆರೋಪದಲ್ಲಿ) ಜೈಲಿನಲ್ಲಿದ್ದು, ಆತನಿಗೆ ಜಾಮೀನು ದೊರಕಿಸಲು ವಕೀಲೆ ಮರೀನಾ ಫರ್ನಾಂಡೀಸ್‌ ₹10 ಲಕ್ಷ ಪಡೆದಿದ್ದರು.

ಜಾಮೀನು ಸಿಗದೇ ಇದ್ದುದರಿಂದ ಮರೀನಾ ಫರ್ನಾಂಡೀಸ್‌ ಅವರು ₹9 ಲಕ್ಷಕ್ಕೆ ಮೂರು ಚೆಕ್‌ಗಳನ್ನು ನೀಡಿದ್ದಾರೆ. ಆದರೆ, ಇದುವರೆಗೂ ಹಣ ಹಿಂದಿರುಗಿಸಿಲ್ಲ. ಮರೀನಾ ಫರ್ನಾಂಡೀಸ್‌ ಅವರು ಆರತಿ ಎಂಬಾಕೆಯನನ್ನು ಪರಿಚಿಸಿದ್ದರು.

ಆರತಿಯು ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಅವರು ಪರಿಚಯಿವಿದೆ ಎಂದು ಹೇಳಿಕೊಂಡು ₹72 ಸಾವಿರವನ್ನು ತನ್ನಿಂದ ಪಡೆದುಕೊಂಡಿದ್ದು, ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ದಯೀನಾಬಾನು ಅವರು ನ್ಯಾಯಾಧೀಶರು ₹50 ಲಕ್ಷ ನಿರೀಕ್ಷಿಸಿರುತ್ತಾರೆ. ಇಲ್ಲವಾದಲ್ಲಿ ಜಾಮೀನು ಪ್ರಕ್ರಿಯೆಯನ್ನು ಬೇರೆ ವಕೀಲರಲ್ಲಿ ಮಾಡಿಸಿಕೊಳ್ಳುವಂತೆ ಸೂಚಿಸಿರುತ್ತಾರೆ ಎಂದಿದ್ದರು.

ಈ ಸಂಬಂಧ ಥೆರೆಸಾ ಅವರು ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ಡಿಸೆಂಬರ್‌ 18ರಂದು ದೂರು ನೀಡಿದ್ದರು.

ಸದರಿ ವಿಷಯದ ಕುರಿತು ಸಿಆರ್‌ಎಲ್‌ಪಿ 11259/2024 ದಾಖಲೆಗಳನ್ನು ಪಡೆದು ದಯೀನಾ ಬಾನು ವಿರುದ್ದ ಕ್ರಮಕೈಗೊಳ್ಳುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ಹೈಕೋರ್ಟ್‌ ಕಾನೂನು ಘಟಕದ ಜಂಟಿ ರಿಜಿಸ್ಟ್ರಾರ್‌ ಎಂ ರಾಜೇಶ್ವರಿ ರವರು ವಕೀಲೆ ದಯೀನ್‌ ಬಾನು ಅವರ ಕ್ರಮಕೈಗೊಳ್ಳಲು ವಿಧಾನಸೌಧ ಠಾಣೆಯ ಪೊಲೀಸರಿಗೆ ಡಿಸೆಂಬರ್‌ 20ರಂದು ದೂರು ನೀಡಿದ್ದರು.

ಇದರ ಅನ್ವಯ ದಯೀನಾ ಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 318(4) (ವಂಚನೆ) ಪ್ರಕರಣ ದಾಖಲಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...