ಉಡುಪಿ ಸರಕಾರಿ ಜಿಮ್ ನಲ್ಲಿ ಹೊಡೆದಾಟ ದೂರು ಪ್ರತಿ ದೂರು ದಾಖಲು

4

“ಪ್ರದೀಪ್‌ ಸ್ಯಾಮುವೆಲ್‌ (45) ಉದ್ಯಾವರ, ಉಡುಪಿ ಇವರು ದಿನಾಂಕ:31/12/2024 ರಂದು  ಅಜ್ಜರಕಾಡು ಸರ್ಕಾರಿ ಎ ಸಿ ಜಿಮ್‌ ಗೆ ಎಂದಿನಂತೆ ಬೆಳಿಗ್ಗೆ 7:30 ಗಂಟೆಗೆ ತೆರಳಿ 8:30 ಗಂಟೆಗೆ ಜಿಮ್‌ ವರ್ಕೌಟ್‌ ಮುಗಿಸಿ ಪಾದರಕ್ಷೆಯನ್ನು ಬದಲಾಯಿಸಲು ಹೊರಗೆ ಹೊರಟು ಪಾದರಕ್ಷೆಯನ್ನು ಇಡುವ ಸ್ಥಳದಲ್ಲಿ.

ಅದೇ ಜಿಮ್‌ ನ ಸದಸ್ಯನಾದ ಲಕ್ಷೀತ್ ಎಂಬಾತನು ಫಿರ್ಯಾದರಾರರನ್ನು ಕಂಡು ನಿಮ್ಮನ್ನು ಜಿಮ್‌ ಟ್ರೈನರ್‌ ಉಮೇಶ್ ರವರು ಕರೆಯುತ್ತಿದ್ದಾರೆ ಎಂದು ತಿಳಿಸಿದ ಮೇರೆಗೆ ಫಿರ್ಯಾದುದಾರರು ಉಮೇಶ್‌ ರವರ ಬಳಿ ಹೋಗಿ ವಿಚಾರಿಸಿದಾಗ ಅವರು ನಾನು ನಿಮ್ಮನ್ನು ಕರೆದಿರುವುದಿಲ್ಲ ಎಂದು ಹೇಳಿರುತ್ತಾರೆ

.ನಂತರ ಫಿರ್ಯಾದುದಾರರು ಪುನಃ ಲಕ್ಷಿತ್‌ ಎಂಬಾತನಲ್ಲಿ ಈ ಬಗ್ಗೆ ಕೇಳಲು  ಹಿಂದಿನಿಂದ ಕರೆಯಲು ಹೋದಾಗ ಏಕಾಏಕಿ ಲಕ್ಷೀತ್ ನು ಜಿಮ್‌ ಸಲಕರಣೆ(ರಾಡ್)‌ ನಿಂದ ಫಿರ್ಯಾದುದಾರರ ತಲೆಗೆ ಹೊಡೆದು ಮಾರಾಣಾಂತಿಕ ಹಲ್ಲೆ ನಡೆಸಿ ಬೂಟುಗಾಲಿನಿಂದ ಹೊಟ್ಟೆಗೆ ಮತ್ತು ಬೆನ್ನಿನ ಭಾಗಕ್ಕೆ ಒದ್ದಿದ್ದು ರಕ್ತಗಾಯವಾಗಿದೆ

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 236/2024, ಕಲಂ: 118(1) 109 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರತಿದೂರು

ಲಕ್ಷೀತ್ (20) ಕೊಡವೂರು, ಉಡುಪಿ ಇವರು  ಅಜ್ಜರಕಾಡು ನಲ್ಲಿರುವ ಸರ್ಕಾರಿ ಜಿಮ್‌ ಗೆ ಎಂದಿನಂತೆ ವ್ಯಾಯಾಮ ಮಾಡಲು ಹೋಗಿದ್ದು,ಬೆಳಿಗ್ಗೆ 8:30 ಗಂಟೆಗೆ ಫಿರ್ಯಾದುದಾರರು ಜಿಮ್‌ ಕೊಠಡಿ ಒಳಗೆ ಹೋದಾಗ

ಪ್ರದೀಪ್‌ ಸ್ಯಾಮ್ಯುವೇಲ್‌ ಎಂಬಾತನು ಅವಾಚ್ಯ ಶಬ್ದಗಳಿಂದ ಬೈದು,  ಕೆನ್ನೆ ಹಾಗೂ ಕುತ್ತಿಗೆ ಭಾಗಕ್ಕೆ  ಹೊಡೆದು ಹಲ್ಲೆ ಮಾಡಿರುತ್ತಾನೆ.

ನಂತರ ಕೊಲೆ ಮಾಡುವ ಉದ್ದೇಶದಿಂದ ಜಿಮ್‌ ನಲ್ಲಿದ್ದ ರಾಡನ್ನು ಹಿಡಿದು ಹಲ್ಲೆ ಮಾಡಲು ಯತ್ನಿಸಿದಾಗ ಫಿರ್ಯಾದುದಾರರು ತಡೆಯಲು ಹೋದಾಗ ಬಲಕೈಗೆ ಪೆಟ್ಟಾಗಿದ್ದು,ಅಲ್ಲದೇ ಆರೋಪಿಯು ಫಿರ್ಯಾದುದಾರರನ್ನು ಉದ್ದೇಶಿಸಿ ಕೊಲೆ ಬೆದರಿಕೆ ಹಾಕಿರುತ್ತಾನೆ

. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 237/2024, ಕಲಂ: 118(1) 351(2) 352 BNS ರಂತೆ ಪ್ರಕರಣ ದಾಖಲಾಗಿದೆ “

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...