ಚೀನಾದಲ್ಲಿ ಎಚ್ಎಂಪಿ ವಿ ವೈರಸ್ ಭಾರತದಲ್ಲಿ ಆತಂಕ ಬೇಡ  ಕೇಂದ್ರ ಸರಕಾರ

41

ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು

. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಹೆಚ್ಎಂಪಿವಿ ಸೋಂಕು


ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.


ಈ ಕುರಿತು ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದು, ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ.


ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು. ಸಾಮಾನ್ಯವಾಗಿ ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತದೆ.

ಚೀನಾದಲ್ಲಿ ಚಳಿಗಾಲದಲ್ಲಿ ಈ ರೀತಿಯ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಕೆಲ ವೈರಸ್ ಹೆಚ್ಚು ತಲ್ಲಣ ಸೃಷ್ಟಿಸಲಿದೆ. ಕಳೆದ 5 ವರ್ಷದಲ್ಲಿ ಪ್ರತಿ ಚಳಿಗಾಲದಲ್ಲಿ ಚೀನಾದಲ್ಲಿ ಕೆಲ ವೈರಸ್ ಆತಂಕ ಸೃಷ್ಟಿಸಿದೆ. ಆದರೆ, ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ. ಭಾರತದಲ್ಲಿ ಈ ವೈರಸ್ ಪ್ರಕರಣ ಪತ್ತೆಯಾಗಿಲ್ಲ.


ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಹಿಮಾಲಯದಲ್ಲಿ ಜಲವಿದ್ಯುತ್ ಯೋಜನೆ: ಟಿಬೆಟ್‌ನಲ್ಲಿ ಅಣೆಕಟ್ಟು ನಿರ್ಮಿಸಲು ಚೀನಾ ಮುಂದು; ಭಾರತಕ್ಕೆ ಕಳವಳ? (ಜಾಗತಿಕ ಜಗಲಿ) ಚೀನಾದಲ್ಲಿ ಇನ್ ಫ್ಲೂಯೆನ್ಜಾ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.


ಎಂಬ ವರದಿಗಳ ಹಿನ್ನೆಲೆಯಲ್ಲಿ ಭಾರತದಲ್ಲೂ ಇಂತಹ ಶೀತಜ್ವರ ಪ್ರಕರಣಗಳ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಿಗಾ ವಹಿಸಿದ್ದು, ಅಂತರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ. ಜೊತೆಗೆ, ಈ ಕುರಿತ ಮಾಹಿತಿ ನಿಯಮಿತವಾಗಿ ಪರಿಶೀಲಿಸಿ ನವೀಕರಿಸುತ್ತಿದೆ ಎಂದು ತಿಳಿಸಿದರು. 5 ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲೂ ಚೀನಾ ಎಲ್ಲವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು.

ಆದರೆ ಕೋವಿಡ್ ವೈರಸ್ ಜಗತ್ತಿಗೆ ಆವರಿಸಿ ವಿಶ್ವವೇ ಸ್ತಬ್ಧವಾಗಿತ್ತು. ಆಸ್ಪತ್ರೆಗಳು ಭರ್ತಿಯಾಗಿತ್ತು, ಎಲ್ಲಾ ದೇಶಗಳು ಕೋವಿಡ್ ಪರಿಸ್ಥಿತಿ ಎದುರಿಸಲು ಹೆಣಗಾಡಿತ್ತು. ಕೊರೋನಾ ಮೊದಲ ಅಲೆ, ಎರಡನೇ ಅಲೆ, ಮೂರನೇ ಅಲೆ ಹೀಗೆ ಒಂದರ ಹಿಂದೆ ಮತ್ತೊಂದರಂತೆ ವಿಶ್ವವನ್ನೇ ತತ್ತರಿಸುವಂತೆ ಮಾಡಿತ್ತು.

Leave a comment

Leave a Reply

Your email address will not be published. Required fields are marked *

Related Articles

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

“ಫೆಬ್ರವರಿ 17 ರಂದು ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು...

ಮಾಜಿ ಪ್ರಧಾನಮಂತ್ರಿ ಖಾಲೇದಾ ಜಿಯಾ ಪುತ್ರ ತಾರಿಕ್ ರೆಹಮಾನ್ ನೇತೃತ್ವದ ಬಿಎನ್ ಪಿ ಪಕ್ಷ ಕ್ಕೆ ಬಹುಮತ ಪ್ರಧಾನಿ ಮೋದಿ ಅಭಿನಂದನೆ

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು...

ಬಲೂಚಿಸ್ತಾನದಲ್ಲಿ ಅಶಾಂತಿ ಪ್ರಯತ್ನಗಳಲ್ಲಿ ಭಾರತ ಭಾಗಿ ಎಂಬ ಪಾಕಿಸ್ತಾನದ ಆರೋಪ ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳಲ್ಲಿ ಭಾರತದ ಭಾಗಿಯಾಗಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ....

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ...