ಚೀನಾ ಕಿರಿಕ್ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕಟ್ಟುವ ಚೀನಾದ ನೂತನ ಡ್ಯಾಮ್ ಗೆ ಭಾರತದ ಆಕ್ಷೇಪ

48

ಚೀನಾದಿಂದ ಎರಡು ಹೊಸ ಕೌಂಟಿಗಳು: ಭಾರತದಿಂದ ಬಲವಾದ ಪ್ರತಿಭಟನೆ, ಬ್ರಹ್ಮಪುತ್ರ ಡ್ಯಾಮ್ ಗೂ ಆಕ್ಷೇಪ ಭಾರತ ಈ ಕುರಿತು ಚೀನಾದೊಂದಿಗೆ “ಬಲವಾದ ಪ್ರತಿಭಟನೆ” ದಾಖಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಶುಕ್ರವಾರ ಹೇಳಿದ್ದಾರೆ.

MEA ವಕ್ತಾರ ರಣಧೀರ್ ಜೈಸ್ವಾಲ್ ಅವರು ಶುಕ್ರವಾರ, ಜನವರಿ 3, 2025 ರಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು


ಲಡಾಕ್ ಗಡಿಯಲ್ಲಿ ಚೀನಾ ಮತ್ತೆ ಕಿರಿಕ್ ಆರಂಭಿಸಿದ್ದು, ಭಾರತದ ಭೂ ಭಾಗದ ಹೋಟಾನ್ ಪ್ರಾಂತ್ಯದಲ್ಲಿ ಎರಡು ಹೊಸ ಕೌಂಟಿಗಳನ್ನು ನಿರ್ಮಿಸಿದೆ. ಚೀನಾದ ಈ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದೆ

. ಭಾರತ ಈ ಕುರಿತು ಚೀನಾದೊಂದಿಗೆ “ಬಲವಾದ ಪ್ರತಿಭಟನೆ” ದಾಖಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಚೀನಾದ ಹೋಟಾನ್ ಪ್ರಿಫೆಕ್ಚರ್‌ನಲ್ಲಿ ಎರಡು ಕೌಂಟಿಗಳ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕಟಣೆಯನ್ನು ನಾವು ಗಮನಿಸಿದ್ದೇವೆ. ಈ ಕೌಂಟಿಗಳ ಕೆಲವು ಭಾಗಗಳು ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಬರುತ್ತವೆ ಮತ್ತು ಚೀನಾದ ಈ ಅಕ್ರಮ ಆಕ್ರಮಣವನ್ನು ಭಾರತ ಎಂದಿಗೂ ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ.

ಸುಮಾರು ಐದು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಗಡಿ ಮಾತುಕತೆಯನ್ನು ಎರಡು ರಾಷ್ಟ್ರಗಳ ವಿಶೇಷ ಪ್ರತಿನಿಧಿಗಳು ಪುನರಾರಂಭಿಸಿದ ಕೆಲವು ದಿನಗಳ ನಂತರ ಎರಡು ಕೌಂಟಿಗಳನ್ನು ನಿರ್ಮಿಸುವ ಕುರಿತು ಚೀನಾ ಘೋಷಣೆ ಮಾಡಿದೆ. “

ಹೊಸ ಕೌಂಟಿಗಳ ನಿರ್ಮಾಣವು ಪ್ರದೇಶದ ಮೇಲೆ ನಮ್ಮ ಸಾರ್ವಭೌಮತ್ವದ ಬಗ್ಗೆ ಭಾರತದ ದೀರ್ಘಕಾಲೀನ ಮತ್ತು ಸ್ಥಿರವಾದ ನಿಲುವಿನ ಮೇಲೆ ಪರಿಣಾಮ ಬೀರುವುದಿಲ್ಲ ಅಥವಾ ಚೀನಾದ ಅಕ್ರಮ ಮತ್ತು ಬಲವಂತದ ಆಕ್ರಮಣಕ್ಕೆ ಒಪ್ಪಿಗೆ ನೀಡುವುದಿಲ್ಲ” ಎಂದು ಜೈಸ್ವಾಲ್ ಹೇಳಿದ್ದಾರೆ.

ಇನ್ನು ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ಮೆಗಾ ಅಣೆಕಟ್ಟು ನಿರ್ಮಿಸುವ ಚೀನಾದ ಉದ್ದೇಶಿತ ಯೋಜನೆಗೂ ಭಾರತ ಆಕ್ಷೇಪ ವ್ಯಕ್ತಪಡಿಸಿದೆ

(ಜಾಗತಿಕ ಜಗಲಿ) ಪ್ರಸ್ತಾವಿತ ಅಣೆಕಟ್ಟಿಗೆ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ, ಬ್ರಹ್ಮಪುತ್ರದ ಕೆಳಗಿರುವ ರಾಜ್ಯಗಳ ಹಿತಾಸಕ್ತಿಗಳಿಗೆ ಅಪ್‌ಸ್ಟ್ರೀಮ್ ಪ್ರದೇಶಗಳಲ್ಲಿನ ಚಟುವಟಿಕೆಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಬೀಜಿಂಗ್ ಅನ್ನು ದೆಹಲಿ ಒತ್ತಾಯಿಸಿದೆ.

“ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಮೇಲ್ವಿಚಾರಣೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ” ಎಂದು ಜೈಸ್ವಾಲ್ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...

ಹೊರ್ಮುಜ್ ಜಲಸಂಧಿ ಕದನ ವಿರಾಮದ ತಪ್ಪು ತಿಳುವಳಿಕೆಯಿಂದ ಅನುಮತಿ ಇಲ್ಲದೆ ಬಂದರೆ ನಿಮ್ಮ ಸರಕು ಸಾಗಾಣಿಕ ಹಡಗುಗಳನ್ನು ಹೊಡೆದುರುಳಿಸ್ತೀವಿ:: ಇರಾನ್ ಎಚ್ಚರಿಕೆ

ಟೆಹ್ರಾನ್: ಕದನ ವಿರಾಮ ಘೋಷಣೆಯಾಗಿದೆ ಎಂದು ಇಡೀ ಜಗತ್ತು ಖುಷಿ ಪಡ್ತಿದ್ರೆ… ಅದ್ಯಾಕೋ ಇರಾನ್ ಯುದ್ಧ...

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ...