ಭೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಹಗರಣಗಳ ತನಿಖೆ ದಾರಿ ತಪ್ಪಿಸುವ ಪ್ರಯತ್ನವಾಗಿಅಧ್ಯಕ್ಷರು ಪಂಚಾಯಿತಿಗೆ ಬೀಗ ಹಾಕಿದ್ದು:: ಪಂಚಾಯತ್ ಸದಸ್ಯ ಸಂತೋಷ್ ಬೈರಂಪಳ್ಳಿ ಆರೋಪ

3

ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ ತನಿಖೆಯ‌ ಹಾದಿ ತಪ್ಪಿಸಲು ಕಚೇರಿಗೆ ಬೀಗ ಜಡಿದು, ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆಯ ಹುನ್ನಾರ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪ

ಉಡುಪಿ: ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳನ್ನು ಮರೆಮಾಚುವ ಉದ್ದೇಶದಿಂದ ಪಂಚಾಯತ್ ಕಚೇರಿಗೆ ಬೀಗ ಜಡಿದು, ಪಂಚಾಯತ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಹಗರಣಗಳ ತನಿಖೆಯ ಹಾದಿ ತಪ್ಪಿಸಿ ಭ್ರಷ್ಟಾಚಾರಿಗಳು, ಕಳ್ಳರು, ಭ್ರಷ್ಟ ಸಿಬ್ಬಂದಿ ಪಲಾಯನ ಮಾಡಲು ಪ್ರಯತ್ನಿಸಿರುವ ವಿಫಲ ಪ್ರಯತ್ನ ಇದಾಗಿದೆ ಎಂದು ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಮಂದಿಯ ಸ್ವಾರ್ಥ ರಾಜಕಾರಣದಿಂದಾಗಿ ಸರಕಾರದ ಅನುದಾನಗಳು ಬಡ ಜನರಿಗೆ ಸಿಗದೆ ದುರುಪಯೋಗವಾಗುತ್ತಿದೆ.

ಗುತ್ತಿಗೆದಾರರು, ಪಂಚಾಯತ್ ನ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಹಿಂದಿನ ಪಿಡಿಓ, ಸಿಬ್ಬಂದಿ, ಇಲಾಖಾ ಇಂಜಿನಿಯರ್ ಗಳು ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಹೀಗಾಗಿ ತನಿಖೆಯ ಹಾದಿ ತಪ್ಪಿಸುವ ಸಲುವಾಗಿ ಹಾಲಿ ಪಿಡಿಓ ಸುಮನಾ ಅವರನ್ನು ವರ್ಗಾವಣೆ ಮಾಡಲು ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ದೂರಿದರು.

ಡಿ. 31ರಂದು ಸಿಬ್ಬಂದಿಯೂ ಪಂಚಾಯತ್ ನ ಬೀಗವನ್ನು ಪಿಡಿಓ ಅವರಿಗೆ ನೀಡದೆ, ಅಧ್ಯಕ್ಷರಿಗೆ ನೀಡಿದ್ದಾರೆ. ಬೀಗದ ಕೀಯನ್ನು ಅಧ್ಯಕ್ಷರು ತನ್ನ ಮನೆಯಲ್ಲಿ ಇಟ್ಟುಕೊಂಡು, ಪಂಚಾಯತ್ ಸಿಬ್ಬಂದಿ ಬೀಗದ ಕೀ ಕೇಳಿದಾಗ ನೀಡಿಲ್ಲ. ಇದು ಸರಿಯಲ್ಲ.

ಇದರಿಂದ ಗ್ರಾಮಸ್ಥರಿಗೂ ತೊಂದರೆ ಆಗಿದೆ ಎಂದರು. ಪಂಚಾಯತ್ ನ ಭ್ರಷ್ಟಾಚಾರದ ವಿರುದ್ದದ ಹೋರಾಟ ಅಂತಿಮ ಹಂತಕ್ಕೆ ತಲುಪಿದ್ದು, ತನಿಖೆಗೆ ಆಗ್ರಹಿಸಿ 2024 ರ ಮಾ.15 ರಂದು ಮೂರನೇ ಬಾರಿಗೆ ದೂರು ಸಲ್ಲಿಸಿದ್ದೇನೆ. ಅದರಂತೆ ಜಿ.ಪಂ ಸಿಇಓ ತನಿಖಾ ತಂಡವನ್ನು ರಚಿಸಿ, ತನಿಖೆ ನಡೆಸಿ ವರದಿ ನೀಡಿದ್ದಾರೆ.

ಲೂಟಿ ಹೊಡೆದಿರುವ ಹಣವನ್ನು ಮರುಪಾವತಿ ಮಾಡುವಂತೆ ಆದೇಶಿಸಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಅಮ್ಮಣ್ಣಿ ಶೆಟ್ಟಿ, ಸದಸ್ಯರಾದ ವಿಜಯ್ ಕುಮಾರ್, ವಿಜಯಶ್ರೀ ಭಟ್, ಉದಯ್ ಪೂಜಾರಿ, ಗ್ರಾಮಸ್ಥೆ ಅನಿತಾ ಪೂಜಾರಿ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...