ಸಂಕಷ್ಟದಲ್ಲಿರುವ ರೈತರ ಬೇಡಿಕೆ ಈಡೇರಿಕೆಗಾಗಿ ನನ್ನ ಜೀವ ಮುಖ್ಯವಲ್ಲ ರೈತನಾಯಕ ಜಗಜಿತ್ ಸಿಂಗ್ ದಲ್ಲೆವಾಲ್

36

“ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 40 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ‘ನಿಮಗಿಂತ ನನ್ನ ಜೀವ ಮುಖ್ಯವಲ್ಲ’ ಎಂದು ಶನಿವಾರ ರೈತರಿಗೆ ಹೇಳಿದ್ದಾರೆ.

ಇಂದು ಖಾನೌರಿ ಗಡಿಯಲ್ಲಿ(ಪಂಜಾಬ್-ಹರಿಯಾಣ ಗಡಿ) ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸವಾಲುಗಳಿಂದ “ಸಂಕಷ್ಟದಲ್ಲಿ ತತ್ತರಿಸುತ್ತಿರುವ” ತಮ್ಮ ಸಹವರ್ತಿ ರೈತರ ಜೀವನದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಾಗಿ ತಿಳಿಸಿದ್ದಾರೆ.

“ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ. ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ದಲ್ಲೆವಾಲ್ ಹೇಳಿದರು.

  ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಬ್ಯಾನರ್ ಅಡಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ರೈತರು ಭಾಗವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ 70 ವರ್ಷದ ರೈತ ನಾಯಕ ದಲ್ಲೆವಾಲ್ ಅವರು, ಹೋರಾಟದಲ್ಲಿ ಒಗ್ಗಟ್ಟಾಗಿ ಇರುವಂತೆ ಒತ್ತಾಯಿಸಿದರು. ದಲ್ಲೆವಾಲ್‌ ಅವರನ್ನು ಸ್ಟ್ರೆಚರ್‌ನಲ್ಲಿ ಪ್ರತಿಭಟನಾ ಸ್ಥಳಕ್ಕೆ ತರಲಾಗಿದ್ದು, ಅವರು ವೇದಿಕೆಯಲ್ಲಿ ಹಾಸಿಗೆಯಲ್ಲಿ ಮಲಗಿಕೊಂಡೇ ರೈತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ,

ಆರೋಗ್ಯ ಹದಗೆಟ್ಟಿದ್ದರೂ ಯಾವುದೇ ವೈದ್ಯಕೀಯ ನೆರವು ಪಡೆಯಲು ಅವರು ಈವರೆಗೆ ನಿರಾಕರಿಸುತ್ತಲೇ ಬಂದಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ದಲ್ಲೆವಾಲ್ ಅವರು ಕಿರು ವೀಡಿಯೊ ಸಂದೇಶಗಳ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಆದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ ಬಳಿಕ ಶನಿವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...