ಸಾರ್ವಜನಿಕರ ವಿರೋಧದ ನಡುವೆ ನಿನ್ನೆ ಮಧ್ಯರಾತ್ರಿಯಿಂದಲೇ ಸರಕಾರಿ ಬಸ್ಸುಗಳ ಟಿಕೆಟ್  ದರ ಏರಿಕೆ ಮಾಡಿದ ರಾಜ್ಯ ಸಾರಿಗೆ ಇಲಾಖೆ

32

“ಹೊಸ ವರ್ಷದ  ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಸಾರಿಗೆ ಇಲಾಖೆ ಕೆಎಸ್ಆರ್ ಟಿ ಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆಆರ್ ಟಿ. ಸಿ, ಕೆಕೆಆರ್ ಟಿಸಿ  ಬಸ್ ಗಳ ಟಿಕೆಟ್ ದರ ಪರಿಷ್ಕರಣೆಗೊಳಿಸಿದ್ದು, ಶೇ 15 ರಷ್ಟು ದರ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್ ದರದ ಬಿಸಿ ತಟ್ಟಿದೆ.


ಸಾರಿಗೆ ಇಲಾಖೆ ನೂತನ ದರಪಟ್ಟಿ ಬಿಡುಗಟೆ ಮಾಡಿದೆ. 50 ರಿಂದ 100 ರೂಪಾಯಿಯಷ್ಟು ಟಿಕೆಟ್ ದರ ಹೆಚ್ಚಳವಾಗಿದೆ.‌ ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬಸ್ ದರ ಏರಿಕೆಯ ನಿರ್ಧಾರಕ್ಕೆ ವಿಪಕ್ಷಗಳು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಏರಿಕೆ ಮಾಡಿದೆ. ಶೇ.42ರಷ್ಟು ದರ ಏರಿಕೆ ಪ್ರಸ್ತಾಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಉತ್ತಮ ಬಸ್‌ ಸೇವೆ ನೀಡುವುದು ಸೇರಿ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಳೆದ ಕೆಲ ತಿಂಗಳ ಹಿಂದೆಯೇ ಪ್ರಯಾಣ ದರ ಏರಿಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು.

ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಶೇ.33ರಷ್ಟು ಹಾಗೂ ಬಿಎಂಟಿಸಿ ಪ್ರಯಾಣ ದರ ಶೇ.42ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲು ಕೋರಿದ್ದವು. ಆದರೆ, ಅದರಲ್ಲಿ ಶೇ.15ರಷ್ಟು ಬಸ್‌ ಪ್ರಯಾಣ ದರಕ್ಕೆ ಅನುಮತಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ವೇಗದೂತ ಸಾರಿಗೆಗೆ ರಾಜ್ಯದಲ್ಲಿ ಟಿಕೆಟ್‌ ದರ 7 ರೂ.ಗಳಿಂದ 115 ರೂಪಾಯಿ ವರೆಗೆ ಹೆಚ್ಚಳವಾಗಿದೆ. ಬೀದರ್‌ ನಿಂದ ಬೆಂಗಳೂರಿಗೆ ಬರಬೇಕಾದರೆ 115 ರೂಪಾಯಿ ಹೆಚ್ಚಿಗೆ ನೀಡಬೇಕು. ಕಲಬುರಗಿಯಿಂದ ಬೆಂಗಳೂರಿಗೆ ಬರಬೇಕಾದರೆ 99 ರೂಪಾಯಿ ಹೆಚ್ಚು ನೀಡಬೇಕಿದೆ. ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಅತ್ಯಂತ ಕನಿಷ್ಠ ಕ್ರಮವಾಗಿ 7 ರೂ. ಹಾಗೂ ಹಾಗೂ 9 ರೂ. ಹೆಚ್ಚಿಗೆ ನೀಡಬೇಕಾಗುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...