ಬೆಂಗಳೂರಿನ 8 ವರ್ಷದ ಮಗುವಿಗೆ ಎಚ್ಎಂಪಿ ವಿ ವೈರಸ್ ಸೋಂಕು ಪತ್ತೆಯೆಂಬದು ನಿಜವಲ್ಲ ::ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

4

HMPV ಹೊಸ ವೈರಸ್ ಅಲ್ಲ, ಭಾರತದಲ್ಲಿ ಮೊದಲ ಕೇಸ್ ಪತ್ತೆ ಎಂಬುದು ನಿಜವಲ್ಲ: ಆರೋಗ್ಯ ಸಚಿವ ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ.

ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ


ಬೆಂಗಳೂರು: ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಇದು ಅಸ್ತಿತ್ವದಲ್ಲಿರುವ ವೈರಸ ಆಗಿದೆ. ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಗುವೊಂದರಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿರುವ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ.

ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.


ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ. ಈ ವೈರಸ್ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಿಗೆ ಬರುತ್ತೆ. ಮಗುವಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಮಗು ಹಾಗೂ ಪೋಷಕರು ಸ್ಥಳೀಯರಾಗಿದ್ದಾರೆ

. ಇಲ್ಲಿ ಕಂಡುಬಂದಿರುವ ವೈರಸ್ಗೂ, ಚೀನಾ ವೇರಿಯಂಟ್ಗೂಐ ಸಂಬಂಧವಿಲ್ಲ. ಇದರ ಬಗ್ಗೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಪ್ರಸ್ತುತ ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಸ್ಯಾಂಪಲ್ ಅನ್ನು ಪುಣೆ ಲ್ಯಾಬ್ ಗೆ ಕಳುಹಿಸುತ್ತೇವೆ.

ಇದರ ಬಗ್ಗೆ ಐಸಿಎಂಆರ್, ಕೇಂದ್ರದಿಂದ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡುತ್ತೇವೆ. ಇದರ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳದರು.




Leave a comment

Leave a Reply

Your email address will not be published. Required fields are marked *

Related Articles

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಮೋದಿಯವರಿಗೆ ನೈತಿಕತೆ ಇಲ್ಲ:: ಮುಖ್ಯಮಂತ್ರಿ ಸಿದ್ದರಾಮಯ್ಯ

“ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಹೀಗಾಗಿ ಮೋದಿ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು...

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳದ ಬಳಿ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ...

ಧರ್ಮಸ್ಥಳ ಠಾಣೆಯಲ್ಲಿ ಎರಡನೇ ದೂರುದಾರ ಜಯಂತ ನೀಡಿದ ದೂರು ಎಸ್ಐಟಿಗೆ ಹಸ್ತಾಂತರ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ...

ಹೈಕೋರ್ಟ್ ಎಚ್ಚರಿಕೆಗೆ ಮಣಿದು ಮುಷ್ಕರ ಮುಂದೂಡಿದ ಸಾರಿಗೆ ಬಸ್ ನೌಕರರು  

“ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ...

Join our WhatsApp community