ಬೆಂಗಳೂರಿನ 8 ವರ್ಷದ ಮಗುವಿಗೆ ಎಚ್ಎಂಪಿ ವಿ ವೈರಸ್ ಸೋಂಕು ಪತ್ತೆಯೆಂಬದು ನಿಜವಲ್ಲ ::ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

50

HMPV ಹೊಸ ವೈರಸ್ ಅಲ್ಲ, ಭಾರತದಲ್ಲಿ ಮೊದಲ ಕೇಸ್ ಪತ್ತೆ ಎಂಬುದು ನಿಜವಲ್ಲ: ಆರೋಗ್ಯ ಸಚಿವ ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ.

ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ


ಬೆಂಗಳೂರು: ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಇದು ಅಸ್ತಿತ್ವದಲ್ಲಿರುವ ವೈರಸ ಆಗಿದೆ. ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಗುವೊಂದರಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿರುವ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ.

ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.


ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ. ಈ ವೈರಸ್ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಿಗೆ ಬರುತ್ತೆ. ಮಗುವಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಮಗು ಹಾಗೂ ಪೋಷಕರು ಸ್ಥಳೀಯರಾಗಿದ್ದಾರೆ

. ಇಲ್ಲಿ ಕಂಡುಬಂದಿರುವ ವೈರಸ್ಗೂ, ಚೀನಾ ವೇರಿಯಂಟ್ಗೂಐ ಸಂಬಂಧವಿಲ್ಲ. ಇದರ ಬಗ್ಗೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಪ್ರಸ್ತುತ ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಸ್ಯಾಂಪಲ್ ಅನ್ನು ಪುಣೆ ಲ್ಯಾಬ್ ಗೆ ಕಳುಹಿಸುತ್ತೇವೆ.

ಇದರ ಬಗ್ಗೆ ಐಸಿಎಂಆರ್, ಕೇಂದ್ರದಿಂದ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡುತ್ತೇವೆ. ಇದರ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳದರು.




Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...