thekarnatakatoday.com
National

ಛತ್ತೀಸ್ ಗಢ ನಕ್ಸಲೀಯರ ಭೀಕರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಪೋಟಿಸಿದ ನಕ್ಸಲ್ ರು 9 ಯೋಧರು ಹುತಾತ್ಮ,

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ!

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ

ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ.

ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್‌ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ ಸುಂದರರಾಜ್ ಖಚಿತಪಡಿಸಿದ್ದಾರೆ.

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ದಂತೇವಾಡ, ನಾರಾಯಣಪುರ ಮತ್ತು ಬಿಜಾಪುರದ ಜಂಟಿ ಕಾರ್ಯಾಚರಣೆ ತಂಡವು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿತ್ತು.

ಜನವರಿ 6ರಂದು ಮಧ್ಯಾಹ್ನ 2.15ರ ಸುಮಾರಿಗೆ ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಮಾವೋವಾದಿಗಳು ಐಇಡಿ ಸ್ಫೋಟಿಸುವ ಮೂಲಕ ಭದ್ರತಾ ಪಡೆಯ ವಾಹನವನ್ನು ಸ್ಫೋಟಿಸಿದ್ದಾರೆ.

ಸ್ಫೋಟದಲ್ಲಿ 9ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

The Karnataka Today

ಮಹಾರಾಷ್ಟ್ರ ಸಿಎಂ ಆಯ್ಕೆ ಪ್ರಧಾನಿ ನರೇಂದ್ರ ಮೋದಿ ಅಮಿತ್ ಶಾ ನಿರ್ಧಾರ ಕ್ಕೆ ಬಿಟ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ

The Karnataka Today

ಜಮ್ಮು ಕಾಶ್ಮೀರ ಉಗ್ರರೊಂದಿಗೆ ನಂಟು ಪೊಲೀಸ್ ಅಧಿಕಾರಿ ಸೇರಿ ಮೂವರು ಸರಕಾರಿ ನೌಕರ ವಜಾ

The Karnataka Today

Leave a Comment