ಛತ್ತೀಸ್ ಗಢ ನಕ್ಸಲೀಯರ ಭೀಕರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಪೋಟಿಸಿದ ನಕ್ಸಲ್ ರು 9 ಯೋಧರು ಹುತಾತ್ಮ,

56

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ!

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ

ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ.

ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್‌ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ ಸುಂದರರಾಜ್ ಖಚಿತಪಡಿಸಿದ್ದಾರೆ.

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ದಂತೇವಾಡ, ನಾರಾಯಣಪುರ ಮತ್ತು ಬಿಜಾಪುರದ ಜಂಟಿ ಕಾರ್ಯಾಚರಣೆ ತಂಡವು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿತ್ತು.

ಜನವರಿ 6ರಂದು ಮಧ್ಯಾಹ್ನ 2.15ರ ಸುಮಾರಿಗೆ ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ಮಾವೋವಾದಿಗಳು ಐಇಡಿ ಸ್ಫೋಟಿಸುವ ಮೂಲಕ ಭದ್ರತಾ ಪಡೆಯ ವಾಹನವನ್ನು ಸ್ಫೋಟಿಸಿದ್ದಾರೆ.

ಸ್ಫೋಟದಲ್ಲಿ 9ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...