ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ 8 ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ದಾಳಿ

36

“ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ,

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ-ಬೆಟಗೇರಿ ನಗರಸಭೆ ಎಇಇ ಆರ್ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.


ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...