ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ 8 ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ದಾಳಿ

58

“ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ,

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ-ಬೆಟಗೇರಿ ನಗರಸಭೆ ಎಇಇ ಆರ್ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.


ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...