thekarnatakatoday.com
News

ದೇವಸ್ಥಾನ ಉತ್ಸವಕ್ಕೆ ಬಂದಿದ್ದ ಆನೆ ಉದ್ವಿಗ್ನಗೊಂಡು ಜನರ ಮೇಲೆ ದಾಳಿ 20ಮಂದಿಗೆ ಗಾಯ

“ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು.

ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ ಆಕ್ರೋಶಗೊಂಡು ತನ್ನ ಮುಂದಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ. ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿಕೊಂಡ ಆನೆ ಏಕಾಏಕಿ ಬಟ್ಟೆ ಒಗೆಯುವಂತೆ ನೆಲಕ್ಕೆ ಒಗೆದಿದೆ.

ಬಳಿಕ ಅಲ್ಲಿ ನೆರೆದಿದ್ದ ಜನರತ್ತ ಆನೆ ನುಗ್ಗಿದ್ದು ಈ ವೇಳೆ ಕನಿಷ್ಟ 20 ಮಂದಿ ಗಾಯಗೊಂಡಿದ್ದಾರೆ ಮತ್ತು ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದುತಿಳಿದುಬಂದಿದೆ.


ಮೂಲಗಳ ಪ್ರಕಾರ ಇಲ್ಲಿನ ಬಿಪಿ ಅಂಗಡಿಯಲ್ಲಿರುವ ಯಾಹೂ ತಂಗಳ್ ದೇಗುಲದಲ್ಲಿ ನಾಲ್ಕು ದಿನಗಳ ವಾರ್ಷಿಕ ಉತ್ಸವಗಳು ಅಥವಾ ನೇರ್ಚಾ ಕಾರ್ಯಕ್ರಮ ನಡೆಯುತ್ತಿತ್ತು. ಈ ವಿಶೇಷ ಕಾರ್ಯಕ್ರಮಕ್ಕಾಗಿ ತರಬೇತಿ ಪಡೆದ ಆನೆಗಳನ್ನು ಕರೆಸಲಾಗಿತ್ತು. ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು.

ಆದರೆ ಕಾರ್ಯಕ್ರಮ ಮುಗಿಯುವ ಕೆಲವೇ ಗಂಟೆಗಳ ಮೊದಲು ಪಕ್ಕೋತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆಯು ದಿಢೀರ್ ಆಕ್ರೋಶಗೊಂಡು ದಾಳಿ ನಡೆಸಿದೆ. ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ

Related posts

ಮುರುಡೇಶ್ವರ ದುರಂತ ಪ್ರಕರಣ ಮೃತ ವಿದ್ಯಾರ್ಥಿನಿಯರ ಕುಟುಂಬ ಕ್ಕೆ 5ಲಕ್ಷ ಪರಿಹಾರ ಘೋಷಣೆ 6 ಶಿಕ್ಷಕರ ಬಂಧನ

The Karnataka Today

ಉತ್ತರಾಖಂಡ್ ಚಮೋಲಿ ಜಿಲ್ಲೆಯ ಮಾನ ಬಳಿ ಬಾರಿ ಹಿಮಾಪಾತ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

The Karnataka Today

ದೆಹಲಿ ವಿಧಾನಸಭಾ ಅಧಿವೇಶನ ಗದ್ದಲವೇಬ್ಬಿಸಿದ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಸಹಿತ 10 ಶಾಸಕರ ಅಮಾನತು

The Karnataka Today

Leave a Comment