ಮುಖ್ಯ ವಾಹಿನಿಯ ಯತ್ತ ನಕ್ಸಲಿಯರು ಮಹಿಳೆ ಸೇರಿದಂತೆ ಐವರು ನಕ್ಸಲಿಯರ ಶರಣಾಗತಿ

58

“ಇಬ್ಬರು ನಕ್ಸಲೀರನ್ನು ಅರಣ್ಯದಿಂದ ಬಂಧಿಸಲಾಗಿದ್ದರೂ ಓರ್ವ ಮಹಿಳೆ ಸೇರಿದಂತೆ ಐವರು ನಕ್ಸಲೀಯರು ಛತ್ತೀಸ್ ಗಢದ ಬಸ್ತಾರ್ ವಲಯದಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಿರಿಯ ನಕ್ಸಲ್ ಮುಖಂಡರಿಂದ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯತೆ, ಪೊಳ್ಳು ನಕ್ಸಲ್ ಸಿದ್ದಾಂತದಿಂದ ಹತಾಶೆಗೊಂಡು ಶರಣಾಗತಿಯಾಗುತ್ತಿರುವುದಾಗಿ ಸೋಮವಾರ ಮಧ್ಯಾಹ್ನ ಸುಕ್ಮಾದಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್ ಪಿಎಫ್ ಅಧಿಕಾರಿಗಳ ಮುಂದೆ ನಕ್ಸಲೀಯರು ಹೇಳಿದ್ದಾರೆ.


ಪ್ರತ್ಯೇಕ ಘಟನೆಯಲ್ಲಿ ಬಿಜಾಪುರ ಜಿಲ್ಲೆಯ ಬರ್ದೆಲಾ ಮತ್ತು ಬಾಡೆ ಗ್ರಾಮಗಳ ನಡುವಣ ಅರಣ್ಯದಿಂದ ಭಾನುವಾರ ಸಂಜೆ ಇಬ್ಬರು ನಕ್ಸಲೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ರಾಜ್ಯ ಸರ್ಕಾರದ ನಕ್ಸಲ್ ಪುರ್ನವಸತಿ ನೀತಿ ಮತ್ತು ದೂರದ ಹಳ್ಳಿಗಳಲ್ಲಿ ಅಭಿವೃದ್ದಿಗಾಗಿ ನಿಯಾದ್ ನೆಲ್ಲನಾರ್’ ಯೋಜನೆಯಿಂದ ಪ್ರೇರಣೆಗೊಂಡು ಶರಣಾಗಿರುವುದಾಗಿ ನಕ್ಸಲೀಯರು ತಿಳಿಸಿದ್ದಾರೆ.

ಈ ನಕ್ಸಲೀಯರು ಪೊಲೀಸ್ ತಂಡಗಳ ಮೇಲೆ ದಾಳಿ, ಐಇಡಿ ಸ್ಫೋಟ, ರಸ್ತೆ ಹಾನಿ, ನಕ್ಸಲ್ ಪೋಸ್ಟರ್ ಮತ್ತು ಬ್ಯಾನರ್ ಅಳವಡಿಕೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...