thekarnatakatoday.com
Karavali Karnataka

ಪಡುಬಿದ್ರೆ ಸಹಕಾರ ವ್ಯವಸಾಯಿಕ ಸಂಘದ ಅಧ್ಯಕ್ಷರ ಕಳೆದೆರಡು ದಶಕಗಳ ಅವ್ಯವಹಾರ ಆರೋಪ ಬ್ರಹತ್ ಪ್ರತಿಭಟನೆ ::ಶೇಖರ್ ಹೆಜಮಾಡಿ

*ಪಡುಬಿದ್ರಿ ಸಹಕಾರಿ ವೃೆವಸಾಯಿಕ ಸಂಘ (ನಿ) ಇದರ ಅಢಳಿತ ಮಂಡಳಿ ಕಳೆದ ಎರಡು ದಶಕಗಳಿಂದ ನಡೆಸಿದ ದುರಾಡಳಿತಾ ಮತ್ತು ಸಾರ್ವಜನಿಕರನ್ನು , ಹಾಗು ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿ ಮತ್ತೆ ಚುನಾವಣೆಗೆ ಮುಂದಾದ ಅಧ್ಯಕ್ಷ ಹಾಗು ಆಡಳಿತ ಮಂಡಳಿ ವಿರುದ್ಧ ಇಲಾಖಾ ತನಿಖೆಯ ಬಗ್ಗೆ ಹಕ್ಕೊತ್ತಾಯ ಪಡಿಸಲು ಜನಜಾಗೃತಿಗಾಗಿ ಜನವರಿ 13 ರಂದು ಸಾರ್ವಜನಿಕ ಬೃಹತ್ ಪ್ರತಿಭಟನೆ….

.ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘ ( ನಿ.)* ಇದರ ಅಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಸುಮಾರು *15 ವರ್ಷಗಳಿಂದ ಈ ಹಿಂದೆ ಇದ್ದ ನಿರ್ದೇಶಕರೇ* ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೂ, ಬ್ಯಾಂಕಿನ ಲಾಭಾಂಶವನ್ನು ತನ್ನ ಸ್ವಹಿತಕ್ಕಾಗಿ ಬಳಸಿಕೊಂಡು ಬಡವರ ಕಣ್ಣೀರ ದುಡ್ಡಿನಲ್ಲಿ ಮೋಜು ಮಸ್ತಿಗಾಗಿ ದೇಶ , ವಿದೇಶಗಳಿಗೆ ಪ್ರವಾಸ ಕೈಗೊಂಡು ಪ್ರತಿ ವರ್ಷ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡುತಿದ್ದಾರೆ.

.ನೆಪ ಮಾತ್ರಕ್ಕೆ ಅಧ್ಯಯನ ಪ್ರವಾಸ ಎಂಬ ಶಿರ್ಷೀಕೆ..ಮತ್ತೇ ಅದೇ ತಂಡ‌ ಈ ಬಾರಿಯ ಚುನಾವಣೆಗೆ ಸಜ್ಜುಗೂಂಡು ಸಹಕಾರಿ ಇಲಾಖೆಯ ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಂಡು ಚುನಾವಣೆಯೇ ನಡೆಯಬಾರದೆಂದು ನಮ್ಮ ತಂಡದ ಸ್ಪರ್ಧಾಳುಗಳ ಮೇಲೆ ಒತ್ತಡ ತರುತಿದ್ದಾರೆ

… ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಗೆ ವಿರುದ್ಧವಾದ ಕೃತ್ಯವಾಗಿದೆ…. *ಹೆಜಮಾಡಿ ಮತ್ತು ಪಡುಬಿದ್ರಿ ಬ್ಯಾಂಕಿನಲ್ಲಿ ನಕಲಿ ಬಂಗಾರದ ಮೇಲೆ ಕೋಟಿ ಹತ್ತಿರದ ಮೊತ್ತದ ಸಾಲ ನೀಡಿರುವುದರಲ್ಲಿ ಅಡಳಿತ ಮಂಡಳಿ ಶಾಮೀಲಾಗಿರುತ್ತದೆ..

ಹಾಗೂ ಹೆಜಮಾಡಿ ಮತ್ತು ಪಲಿಮಾರು ಶಾಖೆಯ ಕಟ್ಟಡದಲ್ಲೂ ಬಹಳ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದ್ದು ಅಲ್ಲದೆ ಇತೀಚೆಗೆ ನಡೆದ ಉದ್ಯೋಗ ನೇಮಕಾತಿಯಲ್ಲಿ ಭಾರಿ ಮೊತ್ತದ ಹಣ ಬೇಡಿಕೆಯನ್ನು ಪಡೆದು ನೂರಾರು ಸಂಖ್ಯೆಯ ಬಡ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ವಂಚಿಸಿರುತ್ತಾರೆ..

ಈ ರೀತಿ ನೇಮಕಾತಿ ನಡೆಸಿದರೂ ಯಾರೂ ಪ್ರಶ್ನಿಸುವಂತಿಲ್ಲ, ಅನ್ಯಾಯಕ್ಕೆ ಒಳಗಾದ ಯುವಜನತೆಯ ಪರವಾಗಿ ಇಂತಹ ಸ್ವಾರ್ಥ ಅಡಳಿತ ಮಂಡಳಿಯ ವಿರುದ್ದ ಪ್ರಜ್ಞಾವಂತ ಮತದಾರರು ಧ್ವನಿಯಾಗ ಬೇಕಾಗಿದೆ..

ಯಾಕೆಂದರೆ 13 ಸದಸ್ಯರೂ ಒಂದೇ ಗುಂಪಿನವರಾಗಿದ್ದೂ ವಿರೋಧ ಪಕ್ಷ ಇಲ್ಲದಿರುವುದೇ ಇದಕ್ಕೆಲ್ಲ ಕಾರಣ. ಇದಲ್ಲದೆ *C. A ಬ್ಯಾಂಕಿನ ಈಗಿರುವ ಕೆಲವು ನಿರ್ದೇಶಕರು ರಾಷ್ಟ್ರೀಯ ಬ್ಯಾಂಕಿನಲ್ಲಿ ಮತ್ತು ಸೊಸೈಟಿ ಯಲ್ಲಿಯೇ ಸಾಲದ ಸುಸ್ತಿದಾರರಾಗಿದ್ದು ಮತ್ತೆ ಸ್ಪರ್ಧಿಸುತ್ತಿದ್ದಾರೆ.* ಇಂಥವರು ಚುನಾವಣೆಯಲ್ಲಿ ಗೆದ್ದರೆ ಪಡುಬಿದ್ರಿ C.A ಬ್ಯಾಂಕ್ ದಿವಾಳಿ ಆಗುವುದು ಖಂಡಿತ..

*ಅದ್ದರಿಂದ ಎರಡು ದಶಕಗಳ ಕಾಲ ಪಡುಬಿದ್ರಿ ಸಹಕಾರಿ ವೃೆವಸಾಯಿಕ ಸಂಘವನ್ನು ದುರಡಳಾಳಿತ ನಡೆಸಿ ಸಾರ್ವಜನಿಕರನ್ನು ಹಾಗು ಯುವಜನತೆಯನ್ನು , ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಮುಂದಾದ ಸೊಸೈಟಿ ಅಧ್ಯಕ್ಷ ಹಾಗು ಅಡಳಿತ ಮಂಡಳಿ ವಿರುದ್ಧ ಇಲಾಖಾ ತನಿಖೆಯ ಬಗ್ಗೆ ಹಕ್ಕೊತ್ತಾಯ

ಪಡಿಸಲು ಜನಜಾಗೃತಿಗಾಗಿ “ಸಾರ್ವಜನಿಕ ಬೃಹತ್ ಪ್ರತಿಭಟನೆಯು” ಜನವರಿ 13 ಸೋಮವಾರದಂದು ಬೆಳಿಗ್ಗೆ 10:00 ಗಂಟೆಗೆ ಪ್ರತಿಭಟನಾ ಜಾಥವು ಪಡುಬಿದ್ರಿ ಗ್ರಾಮ ಪಂಚಾಯತ್ ಯಿಂದ ಹೊರಟು ಕೇಂದ್ರ ಕಚೇರಿಯ ಮುಂದುಗಡೆ ಜನಪರ ಹೋರಾಟ ನಡೆಸಲಾಗುವುದು..


ಈ ಪ್ರತಿಭಟನಾ ಸಭೆಯಲ್ಲಿ ಪ್ರಜ್ಞಾವಂತ ನಾಗರಿಕರು, ವಿದ್ಯಾರ್ಥಿಗಳು , ಮಹಿಳೆಯರು ಹಾಗು ಮತದಾರರು ಭಾಗವಹಿಸುವಂತೆ ಸಹಕಾರಿ ಜನಪರ ಒಕ್ಕೂಟದ ಅಧ್ಯಕ್ಷರಾದ ಶೇಖರ್ ಹೆಜ್ಮಾಡಿ ಕರೆ ನೀಡಿರುತ್ತಾರೆ .

Related posts

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಮೂವರಿಗೆ ಜಾಮೀನು ಮಂಜೂರು ಮಾಡಿದ ಉಡುಪಿ ಜಿಲ್ಲಾ  ನ್ಯಾಯಾಲಯ

The Karnataka Today

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರ ಕಾರ್ಯಾಚರಣೆ 3ಲಕ್ಷ 34ಸಾವಿರ ಮೌಲ್ಯದ ಗಾಂಜಾ ವಶ ಇಬ್ಬರ ಬಂಧನ

The Karnataka Today

ಬಿಜೆಪಿ ಯುವ ಮೋರ್ಚಾ ಮುಖಂಡನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸುಮೋಟೋ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಹವಾಲ್ದಾರ್ ಬೆಟ್ಟು ಒತ್ತಾಯ

The Karnataka Today

Leave a Comment