ರಾಸಲೀಲೆಪ್ರಕರಣ ಅಮಾನತ್ ಗೊಂಡ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಮಹಿಳೆಯಿಂದ ದೂರು ದಾಖಲು

31

ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅಮಾನತುಗೊಂಡು ನ್ಯಾಯಾಂಗ ಬಂಧನದಲ್ಲಿರುವ ಡಿವೈಎಸ್‌ಪಿ ಎ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಮಹಿಳೆ ಗುರುವಾರ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಕೊರಟಗೆರೆ ತಾಲ್ಲೂಕಿನ ಮಹಿಳೆಯೊಬ್ಬರು ಈ ಸಂಬಂಧ ಗುರುವಾರ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ತಮ್ಮ ಕಚೇರಿಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಂಧಿತರಾಗಿದ್ದ ಡಿವೈಎಸ್‌ಪಿ ಎ ರಾಮಚಂದ್ರಪ್ಪ ಅವರನ್ನು ಜೆಎಂಎಫ್‌ಸಿ ನ್ಯಾಯಾಲಯ ಜನವರಿ 4ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಲೈಂಗಿಕ ದೌರ್ಜನ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದರು.

ನ್ಯಾಯಾಂಗ ಬಂಧನದ ಆದೇಶದ ನಂತರ ರಾಮಚಂದ್ರಪ್ಪ ಅವರನ್ನು ತಾಲ್ಲೂಕು ಉಪಕಾರಾಗೃಹಕ್ಕೆ ಕಳುಹಿಸಲಾಯಿತು. ನಿವೇಶನ ನೀಡುವುದಾಗಿ ಹೇಳಿ ತನ್ನಿಂದ 12 ಲಕ್ಷ ರೂ. ಹಣ ಪಡೆದ ಪ್ರಭಾವಿ ವ್ಯಕ್ತಿಯೊಬ್ಬ ನಿವೇಶನವನ್ನೂ ನೀಡದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಿದ್ದಾನೆ.

ಆತನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಮಹಿಳೆಯು ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿದ್ದರು. ಈ ಸಂಬಂಧ ಮಹಿಳಾ ಆಯೋಗವು ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಪತ್ರ ಬರೆದಿತ್ತು

ರಾಜ್ಯ ಮಹಿಳಾ ಆಯೋಗದ ಶಿಫಾರಸಿನ ಮೇರೆಗೆ ತಾನು ಸಲ್ಲಿಸಿದ್ದ ವಂಚನೆ ಪ್ರಕರಣದ ವಿಚಾರಣೆ ನೆಪದಲ್ಲಿ ತನ್ನನ್ನು ಠಾಣೆಗೆ ಕರೆಸಿಕೊಂಡ ರಾಮಚಂದ್ರಪ್ಪ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.

ಒಂದಲ್ಲ ಒಂದು ಕಾರಣಕ್ಕೆ ರಾಮಚಂದ್ರಪ್ಪ ತನ್ನನ್ನು ಠಾಣೆಗೆ ಕರೆಸುತ್ತಿದ್ದರು. ನಾನು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ, ನನ್ನ ಪತಿಯನ್ನು ಹೊರಗೆ ಕಾಯುವಂತೆ ಹೇಳಿ ರಾಮಚಂದ್ರಪ್ಪ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...