ದೆಹಲಿ ವಿಧಾನಸಭಾ ಚುನಾವಣೆ  29 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

2

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 29 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆಗೊಳಿಸಿದೆ. ಕಪಿಲ್ ಮಿಶ್ರಾ ಮತ್ತು ಹರೀಶ್ ಖುರಾನಾ ಅವರನ್ನು ಕ್ರಮವಾಗಿ ಕರವಾಲ್ ನಗರ ಮತ್ತು ಮೋತಿ ನಗರದಿಂದ ಕಣಕ್ಕಿಳಿಸಿದೆ.

ನರೇಲಾದಿಂದ ರಾಜ್ ಕರಣ್ ಖತ್ರಿ, ತಿಮಾರ್‌ಪುರದಿಂದ ಸೂರ್ಯ ಪ್ರಕಾಶ್ ಖತ್ರಿ, ಮುಂಡ್ಕಾದಿಂದ ಗಜೇಂದ್ರ ದಾರಾಲ್, ಕಿರಾರಿಯಿಂದ ಬಜರಂಗ್ ಶುಕ್ಲಾ, ಸುಲ್ತಾನ್‌ಪುರ ಮಜ್ರಾದಿಂದ ಕರಣ್ ಸಿಂಗ್ ಕರ್ಮಾ, ಶಕುರ್ ಬಸ್ತಿಯಿಂದ ಕರ್ನೈಲ್ ಸಿಂಗ್ ಮತ್ತು ತ್ರಿನಗರದಿಂದ ತಿಲಕ್ ರಾಮ್ ಗುಪ್ತಾ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.

ಸದರ್ ಬಜಾರ್‌ನಿಂದ ಮನೋಜ್ ಕುಮಾರ್ ಜಿಂದಾಲ್, ಚಾಂದಿನಿ ಚೌಕದಿಂದ ಸತೀಶ್ ಜೈನ್, ಮಟಿಯಾ ಮಹಲ್‌ನಿಂದ ದೀಪ್ತಿ ಇಂದೋರಾ, ಮಾದಿಪುರದಿಂದ ಊರ್ಮಿಳಾ ಕೈಲಾಶ್ ಗಂಗ್ವಾಲ್, ಹರಿನಗರದಿಂದ ಶ್ಯಾಮ್ ಶರ್ಮಾ, ತಿಲಕ್ ನಗರದಿಂದ ಶ್ವೇತಾ ಸೈನಿ ಸೇರಿದಂತೆ ಇತರ ಹಲವು ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ.

70 ವಿಧಾನಸಭಾ ಸ್ಥಾನಗಳ ಪೈಕಿ ಉಳಿದ 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಸಂಜೆ ಸಭೆ ಸೇರಿತ್ತು. ಇಂದು 29 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.

ಈ ಹಿಂದೆ ಜನವರಿ 4 ರಂದು 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರನ್ನು ನವದೆಹಲಿ ಕ್ಷೇತ್ರದಿಂದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಮುಖ್ಯಮಂತ್ರಿ ಅತಿಶಿ ಸ್ಪರ್ಧಿಸುತ್ತಿರುವ ಕಲ್ಕಾಜಿಯಿಂದ ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಇಸ್ಲಾಂಗೆ ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ ಭಾಗ್ಯಶ್ರೀ ಹತ್ಯೆ ಮಾಡಿದ ಶೇಖ್ ರಯೀಸ್

ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...