ಎಟಿಎಮ್ ಗೆ ಹಣ ಹಾಕಲು ಬಂದಿದ್ದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಓರ್ವ ಸಿಬ್ಬಂದಿ ಸ್ಥಳದಲ್ಲಿ ಮೃತ್ಯು ಹಣದೊಂದಿಗೆ ಪರಾರಿಯಾದ   ದರೋಡೆಕೋರರು

2

“ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.  ಎಸ್ ಬಿ ಐ  ಬ್ಯಾಂಕ್ ಸಿಬ್ಬಂದಿ ಜಿಎಸ್’ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು.


ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


Leave a comment

Leave a Reply

Your email address will not be published. Required fields are marked *

Related Articles

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ ...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್...

180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ...